ಬಾಗಲಕೋಟೆ: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಅನುಷ್ಠಾನಗೊಳ್ಳುತ್ತಿರುವ ವಿವಿಧ ಮಹತ್ವದ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಕ್ರಮವಹಿಸುವಂತೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ ಅಽಕಾರಿಗಳಿಗೆ ಸೂಚಿಸಿದರು.
ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಸೋಮವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವಿವಿಧ ಯೋಜನೆಗಳ ತ್ರೆÊಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಿಷನ್ ಶಕ್ತಿ ಯೋಜನೆ, ಸಾಂತ್ವನ ಕೇಂದ್ರ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಸಖಿ ಒನ್ ಸ್ಟಾಪ್ ಸೆಂಟರ್, ಬೇಟಿ ಬಚಾವೋ ಭೇಟಿ ಪಡಾವೋ, ಪ್ರಧಾನಮಂತ್ರಿ ಮಾತೃವಂದನಾ ಯೋಜನೆ, ಕೌಟುಂಬಿಕ ಹಿಂಸೆಯಿAದ ಮಹಿಳೆಯರ ಸಂರಕ್ಷಣಾ ಕಾಯ್ದೆ-೨೦೦೫ ಸೇರಿದಂತೆ ಅನೇಕ ಮಹತ್ವದ ಯೋಜನೆಗಳು ಸಪರ್ಮಕವಾಗಿ ಅನುಷ್ಠಾನಗೊಳಿಸಬೇಕು ಎಂದರು.
ಇಲಾಖೆಯಿಂದ ಅನುಷ್ಠಾನಗೊಳುತ್ತಿರುವ ಕಾಯ್ದೆಗಳು ಹಾಗೂ ಯೋಜನೆಗಳನ್ನು ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಹಾಗೂ ಜಿಲ್ಲೆಯಿಂದ ಅಪೌಷ್ಠಿಕತೆ, ಬಾಲ್ಯವಿವಾಹ ಪ್ರಕರಣಗಳನ್ನು ಹಾಗೂ ಮಹಿಳೆಯರ ಮತ್ತು ಮಕ್ಕಳ ಅನೈತಿಕ ಸಾಗಣಿಕೆ ತಡೆಗಟ್ಟುವದು ಹಾಗೂ ಕೇಂದ್ರ ಸರ್ಕಾರದ ನಿರ್ದೇಶನದಂತೆ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ಜ.೨೨ ರಿಂದ ಮಾ. ೮ ವರೆಗೆ ಸರಣಿ ಕಾರ್ಯಕ್ರಮ ಯಶಸ್ವಿಯಾಗಿ ಹಮ್ಮಿಕೊಳ್ಳಲು ಎಲ್ಲ ಅಽಕಾರಿಗಳು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಕೆ.ಪ್ರಭಾಕರ ವಿವಿಧ ಯೋಜನೆಗಳಲ್ಲಿ ಸಾಽಸಿದ ಪ್ರಗತಿ ವರದಿಯನ್ನು ಸಭೆಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ನಿರೂಪಣಾಽಕಾರಿ ಮಂಜುನಾಥ ಪರಸನ್ನವರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಽಕಾರಿ ಸುಮಂಗಲಾ ಹೀರೆಮನಿ, ಜಿಲ್ಲೆಯ ಎಲ್ಲ ತಾಲೂಕಿನ ಶಿಶು ಅಭಿವೃದ್ಧಿ ಯೋಜನಾಽಕಾರಿಗಳು ಹಾಗೂ ಎಲ್ಲಾ ಯೋಜನೆಗಳ ಸಮಿತಿಯ ಜಿಲ್ಲಾ ಮಟ್ಟದ ಅಽಕಾರಿಗಳು ಹಾಗೂ ಸದಸ್ಯರುಗಳು ಮತ್ತು ಯೋಜನೆಗಳಿಗೆ ಸಂಬAಽಸಿದ ಸಂಘ ಸಂಸ್ಥೆಗಳ ಮುಖ್ಯಸ್ಥರುಗಳು ಉಪಸ್ಥಿತರಿದ್ದರು.