ಯೋಧರೆ ನಿಜವಾದ ಹೀರೋಗಳು- ಚಿದಾನಂದ ಸವದಿ

blank

ಕೊಟ್ಟಲಗಿ: ಅನ್ನ ನೀಡುವ ರೈತ, ವಿದ್ಯೆ ನೀಡುವ ಶಿಕ್ಷಕ ಹಾಗೂ ದೇಶ ಗಡಿ ಕಾಯುವ ಮೂಲಕ ನಮ್ಮೆಲ್ಲರನ್ನು ರಕ್ಷಿಸುವ ಯೋಧರೆ ನಿಜವಾದ ಹೀರೋಗಳು ಎಂದು ಕಾಂಗ್ರೆಸ್ ಮುಖಂಡ ಚಿದಾನಂದ ಸವದಿ ಹೇಳಿದರು.

ಗ್ರಾಮದಲ್ಲಿ ಮಾಜಿ ಸೈನಿಕರ ಸೇವಾ ಸಂಘ ಆಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಭಾರತೀಯ ಭೂ ಸೇನೆಯಲ್ಲಿ ಸೇವೆ ಸಲ್ಲಿಸಿ ಸ್ವಗ್ರಾಮಕ್ಕೆ ಆಗಮಿಸಿದ ನಿವೃತ್ತ ಯೋಧ ಮೋಸಿನ್ ಸಿಕಂದರ್ ಮುಲ್ಲಾ ಅವರ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು.

ಯುವಕರು ದುಶ್ಚಟಗಳಿಂದ ದೂರಾಗುವ ಮೂಲಕ ನಿರ್ದಿಷ್ಟ ಗುರಿ ಹೊಂದಿ ನಿರಂತರ ಪ್ರಯತ್ನ ಹಾಗೂ ಪರಿಶ್ರಮದಿಂದ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕಕಮರಿಯ ಅತ್ಮಾರಾಮ ಸ್ವಾಮೀಜಿ ಮಾತನಾಡಿ, ದೇಶ ಸೇವೆ ಹಾಗೂ ರಕ್ಷಣೆಗಾಗಿ ಕಾರ್ಯನಿರ್ವಹಿಸುವ ಯೋಧರ ಸೇವಾ ಮನೋಭಾವ ಹಾಗೂ ತ್ಯಾಗ ಅಪಾರ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಹೊನವಾಡದ ಬಾಬು ಮಹಾರಾಜರು, ಮುಫ್ತಿ ಹಬೀಬಉಲ್ಲಾ ಕಾಶ್ಮಿ, ಮೌಲಾನಾ ಅಬ್ಬಾಸ್, ಜಿಸಲಪ್ಪ ತಾಂವಶಿ, ಸಿಕಂದರ ಮುಲ್ಲಾ ಇತರರಿದ್ದರು.

Share This Article

ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್​ ವಿಧಾನ | Recipe

ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…

ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…

ಟೊಮೆಟೊ ಸೇವನೆ ಕ್ಯಾನ್ಸರ್​ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips

ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್​​.…