ರಾಗಿ ಮಾರಿದ್ದ ರೈತರಿಗೆ ಬಾರದ ಹಣ-  ಪಾವತಿಗೆ ಸಿಎಂ ಸಿದ್ದರಾಮಯ್ಯ ಸೂಚನೆ 

blank

ದಾವಣಗೆರೆ: ದಾವಣಗೆರೆ ಖರೀದಿ ಕೇಂದ್ರದಲ್ಲಿ ರಾಗಿ ಮಾರಾಟ ಮಾಡಿದ್ದ ರೈತರಿಗೆ ಬಾಕಿ ಹಣ ಬಿಡುಗಡೆ ಮಾಡುವಂತೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸಿಎಂ ಗೃಹಕಚೇರಿಯಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಜನತಾದರ್ಶನದಲ್ಲಿ ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ನೇತೃತ್ವದಲ್ಲಿ ತೆರಳಿದ್ದ ದಾವಣಗೆರೆ ತಾಲೂಕು, ಮಾಯಕೊಂಡ ರೈತ ಮುಖಂಡರು, ರಾಗಿ ಖರೀದಿ ಕೇಂದ್ರದಲ್ಲಿ ಮಾರಾಟ ಮಾಡಿದ್ದ ರಾಗಿಯ ಹಣ ಬಿಡುಗಡೆಗೆ ಕೋರಿದರು.
ಶಾಸಕ ಕೆ.ಎಸ್.ಬಸವಂತಪ್ಪ ಮಾತನಾಡಿ ಈ ಬಾರಿ ಮುಂಗಾರು ಮಳೆ ಇಲ್ಲದೆ ಬೆಳೆಗಳು ಒಣಗಿ ರೈತರು ತತ್ತರಿಸಿದ್ದಾರೆ. ಕಳೆದ ವರ್ಷ ಬೆಳೆದ ರಾಗಿಯನ್ನು ಖರೀದಿ ಕೇಂದ್ರಕ್ಕೆ ಮಾರಾಟ ಮಾಡಿದ ರೈತರಿಗೆ ಬಾಕಿ ಹಣ ನೀಡಿಲ್ಲ. ಈ ವರ್ಷ ಮಳೆ ಇಲ್ಲದೆ ಬಿತ್ತನೆ ಮಾಡಿದ ಬೆಳೆ ಹಾನಿಗೆ ಒಳಗಾಗಿ ಸಾಲಗಾರರಾದ ರೈತರು ಕಂಗಾಲಾಗಿದ್ದಾರೆ. ಬಾಕಿ ಹಣ ಬಿಡುಗಡೆ ಮಾಡಬೇಕು ಎಂದು ಮನವರಿಕೆ ಮಾಡಿದರು.
ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಗಿ ಖರೀದಿ ಕೇಂದ್ರದ ವ್ಯವಸ್ಥಾಪಕ ನಿರ್ದೇಶಕರಿಗೆ ಕರೆ ಮಾಡಿ ರೈತರ ಬಾಕಿ ಹಣವನ್ನು ಬಿಡುಗಡೆ ಮಾಡುವಂತೆ ಆದೇಶಿಸಿದರು ಎಂದು ಶಾಸಕ ಕೆ.ಎಸ್.ಬಸವಂತಪ್ಪ ಪತ್ರಿಕೆಗೆ ತಿಳಿಸಿದರು

Share This Article

ಮಕರ ರಾಶಿಗೆ ಬುಧ ಪ್ರವೇಶ: ಈ 5 ರಾಶಿಯವರಿಗೆ ರಾಜಯೋಗ, ಖುಲಾಯಿಸಲಿದೆ ಅದೃಷ್ಟ! Zodiac Sign

Zodiac Sign : ಜ್ಯೋತಿಷ್ಯದ ಆಧಾರದ ಮೇಲೆ, ಒಬ್ಬರು ಜನಿಸಿದ ರಾಶಿ, ನಕ್ಷತ್ರ ಹಾಗೂ ಗ್ರಹಗಳ…

ಪೇನ್​ ಕಿಲ್ಲರ್ ಮಾತ್ರೆ​ vs ಜೆಲ್​… ಎರಡರಲ್ಲಿ ಯಾವುದು ಉತ್ತಮ? ಇಲ್ಲಿದೆ ಉಪಯುಕ್ತ ಮಾಹಿತಿ… Painkiller Tablet vs Gel

Painkiller Tablet vs Gel : ದೇಹವು ಗಾಯಗೊಂಡಾಗ ಅಥವಾ ಉಳುಕಿದಾಗ ನೋವು ಅನುಭವಿಸುವುದು ಸಹಜ.…

ಹಾಗಲಕಾಯಿಯಲ್ಲಿನ ಕಹಿ ತೆಗೆಯುವುದೇಗೆ ಎಂದು ಆಲೋಚಿಸುತ್ತಿದ್ದೀರಾ; ನಿಮಗಾಗಿ ಈ ಸಿಂಪಲ್​ ಟ್ರಿಕ್ಸ್​ ​ | Health Tips

ಚಳಿಗಾಲದಲ್ಲಿ ಮಂಜಿನಿಂದಾಗಿ ಸೂರ್ಯನ ಬೆಳಕು ಕಡಿಮೆ ಇರುತ್ತದೆ. ಇದರಿಂದ ಜನರು ಹಾಗಲಕಾಯಿಯ ರುಚಿ ನೋಡುವುದಿಲ್ಲ. ಏಕೆಂದರೆ…