ರೈತರಿಗೆ ಸಹಕಾರಿಯಾಗಿದೆ ಈ ಕಾರ್ಯ

blank

ಹಗರಿಬೊಮ್ಮನಹಳ್ಳಿ: ರೈತರ ಜಮೀನುಗಳ ಹಳೆಯ ಭೂ ದಾಖಲೆಗಳನ್ನು ಸಂರಕ್ಷಿಸಲು ಡಿಜಿಟಲೀಕರಣ ಅನಿವಾರ್ಯ ಮತ್ತು ಸಹಕಾರಿಯಾಗಿದೆ ಎಂದು ಶಾಸಕ ಕೆ.ನೇಮಿರಾಜ್ ನಾಯ್ಕ ತಿಳಿಸಿದರು.

blank
blank

ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ರೈತರ ಭೂ ದಾಖಲೆಗಳ ಡಿಜಿಟಲೀಕರಣಕ್ಕೆ ಚಾಲನೆ ನೀಡಿ ಬುಧವಾರ ಮಾತನಾಡಿದರು. ರೈತರ ಜಮೀನುಗಳ ದಾಖಲಾತಿಗಳು ಹಲವಾರು ವರ್ಷಗಳಿಂದ ದುಸ್ಥಿತಿಯಲ್ಲಿವೆ. ಈ ಹಿನ್ನೆಲೆಯಲ್ಲಿ ಭೂ ದಾಖಲೆಗಳನ್ನು ಶಾಶ್ವತವಾಗಿ ಡಿಜಿಟಲ್ ದಾಖಲೆಗಳಾಗಿ ಪರಿವರ್ತನೆ ಮಾಡಲಾಗುವುದು. ಇದರಿಂದ ರೆಕಾರ್ಡ್ ರೂಮ್‌ಗಳಿಂದ ದಾಖಲೆಗಳನ್ನು ಪಡೆದುಕೊಳ್ಳಲು ಇರುವ ತೊಂದರೆಗಳ ನಿವಾರಣೆಯಾಗಲಿದೆ. ನಿತ್ಯ ಸಾವಿರಾರು ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಣ ಮಾಡಲಾಗುವುದು ಎಂದರು.

ತಹಸೀಲ್ದಾರ್ ಆರ್.ಕವಿತಾ ಮಾತನಾಡಿ, ಡಿಜಿಟಲೀಕರಣ ಮಾಡುವುದರಿಂದ ದಾಖಲೆಗಳನ್ನು ತಿದ್ದಲು ಬರುವುದಿಲ್ಲ. ಕಳ್ಳತನ ಮಾಡಲಿಕ್ಕೂ ಆಗುವುದಿಲ್ಲ. ಜನರು ನೇರವಾಗಿ ದಾಖಲೆಗಳನ್ನು ಡಿಜಿಟಲ್ ಮಾಧ್ಯಮದಿಂದ ಪಡೆದುಕೊಳ್ಳಬಹುದು. ದಾಖಲೆ ಪಡೆಯಲು ವಿಳಂಬವಾಗುವುದಿಲ್ಲ ಎಂದರು.

Share This Article

ತಂದೆಯಾಗಿ ನಿಮ್ಮ ಮಗನಿಗೆ ಕಲಿಸಲೇ ಬೇಕಾದ ವಿಷಯಗಳಿವು…| Dad

Dad: ಈಗಿನ ದಿನಗಳಲ್ಲಿ ಮಕ್ಕಳನ್ನು ಬೆಳೆಸುವುದು ದೊಡ್ಡ ಸವಾಲಾಗಿದೆ. ತಮ್ಮ ಮಕ್ಕಳಿಗೆ ಶಿಕ್ಷಣ, ಶಿಸ್ತು ಮತ್ತು…

ದೇಹದ ಈ ಭಾಗಗಳ ಮೇಲೆ ಅಪ್ಪಿತಪ್ಪಿಯೂ ಟ್ಯಾಟೂ ಹಾಕಿಸಬೇಡಿ..ಅಪಾಯ ಖಂಡಿತ! Tattoo

Tattoo: ಇತ್ತೀಚಿನ ದಿನಗಳಲ್ಲಿ ಟ್ಯಾಟೂ ಹಾಕಿಸಿಕೊಳ್ಳುವುದು ಫ್ಯಾಷನ್  ಆಗಿದೆ. ಹುಡುಗರಿಂದ ಹಿಡಿದು ಹುಡುಗಿಯರವರೆಗೆ ಎಲ್ಲರೂ ತಮ್ಮ…

ಕಂಕುಳಲ್ಲಿರುವ ಕಪ್ಪು ಕಲೆ ಕಡಿಮೆಯಾಗಲು ಏನು ಮಾಡಬೇಕು? underarms

underarms: ಅನೇಕ ಹುಡುಗಿಯರು ಕಂಕುಳಲ್ಲಿನ ಕಪ್ಪು ಕಲೆಗಳನ್ನು ಹೋಗಲಾಡಿಸಲು  ಅನೇಕ ಪ್ರಯತ್ನ ಮಾಡುತ್ತಾರೆ. ಇದಕ್ಕಾಗಿ ಅವರು…