ಲ್ಯಾಪ್‌ಟಾಪ್ ಖರೀದಿ ಅವ್ಯವಹಾರ ತನಿಖೆಯಾಗಲಿ

ಬೆಳಗಾವಿ: ಮಹಾನಗರ ಪಾಲಿಕೆ ವತಿಯಿಂದ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಕೊಡಲಾಗುವ ಲ್ಯಾಪ್‌ಟಾಪ್ ಖರೀದಿ ಪ್ರಕ್ರಿಯೆಯಲ್ಲಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಪಾಲಿಕೆ ಆವರಣದಲ್ಲಿ ಬುಧವಾರ ಡಾ.ಬಿ.ಆರ್.ಅಂಬೇಡ್ಕರ್ ಶಕ್ತಿ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

blank

ಪಾಲಿಕೆಯ ಎಸ್‌ಸಿಟಿಪಿ, ಟಿಎಸ್‌ಪಿ ಯೋಜನೆ ಅಡಿಯಲ್ಲಿ ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ನೀಡಲು 20 ಲಕ್ಷ ರೂ. ವೆಚ್ಚದಲ್ಲಿ ಲ್ಯಾಪ್‌ಟಾಪ್ ಖರೀದಿಸಲಾಗಿದೆ. ಆದರೆ, ಮಾರುಕಟ್ಟೆಯಲ್ಲಿ 30 ಸಾವಿರ ರೂ. ಮೌಲ್ಯದ ಲಾಪ್‌ಟಾಪ್‌ಗಳಿಗೆ 50 ಸಾವಿರ ರೂ. ಎಂದು ನಮೂದಿಸಿ ಬಿಲ್ ತೆಗೆದಿದ್ದಾರೆ.

ಇದರಲ್ಲಿ ಲಕ್ಷಾಂತರ ರೂ. ಅವ್ಯವಹಾರ ನಡೆದಿದ್ದು, ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
ಸಂಘದ ಅಧ್ಯಕ್ಷ ಲಕ್ಷ್ಮಣ ಕೋಲಕಾರ, ಅರುಣ ಕೋಲಕಾರ, ಕಸ್ತೂರಿ ನಿಂಗನೂರ, ಶೋಭಾ, ಯಶವಂತ ತಳವಾರ ಇತರರಿದ್ದರು.

Share This Article
blank

ಬಿಸಾಡುವ ಮುನ್ನ ತಿಳಿಯಿರಿ Watermelon Seeds ಪವರ್​​: ಇದರಲ್ಲಿದೆ 5 ನಂಬಲಾಗದ ಆರೋಗ್ಯ ಪ್ರಯೋಜನೆಗಳು

Watermelon Seeds: ಬೇಸಿಗೆಯಲ್ಲಿ ಬಿಸಿಲು ಜೋರಾದ ತಕ್ಷಣ ದೇಹವನ್ನು ತಂಪಾಗಿಸಲು ನಾವು ಹೆಚ್ಚಾಗಿ ಕಲ್ಲಂಗಡಿಯನ್ನು ಆಶ್ರಯಿಸುತ್ತೇವೆ.…

ಈ ಗಿಡಗಳನ್ನು ಬೆಳೆಸಿದರೆ ಸಾಕು, ನಿಮ್ಮ ಮನೆಗೆ ಒಂದೇ ಒಂದು ಸೊಳ್ಳೆಯೂ ಬರುವುದಿಲ್ಲ..Plants

Plants: ಮಳೆಗಾಲ ಬಂತೆಂದರೆ ಸಾಕು ಅನೇಕ ಜನರು ತಮ್ಮ ಮನೆಯಂಗಳದಲ್ಲಿ ವಿವಿಧ ಗಿಡಗಳನ್ನ ನೆಡಲು ಪ್ರಾರಂಭಿಸುತ್ತಾರೆ.…

blank