ವಾತ್ಸಲ್ಯ ಮನೆ ಹಸ್ತಾಂತರ

blank

ಕೊಪ್ಪ: ಹರಿಹರಪುರ ಸಮೀಪದ ಕಲ್ಮಕ್ಕಿ ಗ್ರಾಮದ ಪುಟ್ಟಮ್ಮ ಎಂಬುವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಾತ್ಸಲ್ಯ ಕಾರ್ಯಕ್ರಮದಡಿ ಮನೆ ದುರಸ್ತಿಗೊಳಿಸಿ, ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿ ಶೌಚಗೃಹ ದುರಸ್ತಿಪಡಿಸಿ ಹಸ್ತಾಂತರಿಸಲಾಯಿತು.

ಒಂಟಿಯಾಗಿದ್ದ ಪುಟ್ಟಮ್ಮ ಬಡತನದಲ್ಲಿದ್ದು, ಕಷ್ಟದಲ್ಲಿ ದಿನ ಕಳೆಯುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಧರ್ಮಸ್ಥಳ ಸಂಘ ಅವರಿಗೆ ಸಾವಿರ ರೂಪಾಯಿ ಮಾಸಾಶನ ನೀಡಿ, ಮನೆ ದುರಸ್ತಿಪಡಿಸಿಕೊಟ್ಟಿದೆ.
ದುರಸ್ತಿಪಡಿಸಿದ ಮನೆಯನ್ನು ಗ್ರಾಮಾಭಿವೃದ್ಧಿ ಯೋಜನೆ ಜಿಲ್ಲಾ ನಿರ್ದೇಶಕ ಸದಾನಂದ ಬಂಗೇರ ಹಸ್ತಾಂತರಿಸಿ ಮಾತನಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಸಂಘ ಜನಮಂಗಲ ಕಾರ್ಯಕ್ರಮದಡಿ ಅಂಗವಿಕಲವಿಕರಿಗೆ ಸಲಕರಣೆ ವಿತರಣೆ, ಮಾಸಾಶನ ವಿತರಣೆ, ವಾತ್ಸಲ್ಯ ಗೃಹ ನಿರ್ಮಾಣ ಇನ್ನುಮುಂತಾದ ಜನಕಲ್ಯಾಣ ಕಾರ್ಯದ ಮೂಲಕ ಬಡವರಿಗೆ ಉಪಯೋಗವಾಗುತ್ತಿದೆ ಎಂದರು.
ಹರಿಹರಪುರ ಗ್ರಾಪಂ ಉಪಾಧ್ಯಕ್ಷೆ ಆಶಾ, ನರಸೀಪುರ ಗ್ರಾಪಂ ಸದಸ್ಯ ಅನಿಲ್‌ಕುಮಾರ್, ಒಕ್ಕೂಟ ಅಧ್ಯಕ್ಷ ಜಗನ್ನಾಥ, ಪದಾಧಿಕಾರಿಗಳಾದ ವಿಮಲಾ, ಸದಾನಂದ, ದೇವಪ್ಪ, ತಾಲೂಕು ಯೋಜನಾಧಿಕಾರಿ ನಿರಂಜನ್ ಇತರರಿದ್ದರು.

blank
Share This Article

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…

ಗಂಡ-ಹೆಂಡತಿಯ ಸಂಬಂಧದಲ್ಲಿ ಮೂರನೇ ವ್ಯಕ್ತಿ ಎಂಟ್ರಿಯಾಗಿದ್ದರೆ ಈ ರೀತಿ ಸುಲಭವಾಗಿ ತಿಳಿದುಕೊಳ್ಳಬಹುದು..! Husband and Wife

Husband and Wife : ಕಷ್ಟ-ಸುಖ, ನೋವು-ನಲಿವು ಹಾಗೂ ದೇಹ ಎಲ್ಲವನ್ನು ಹಂಚಿಕೊಳ್ಳುವ ಗಂಡ-ಹೆಂಡತಿ ನಡುವಿನ…