ವಿಟಿಯು ಅಂತರಕಾಲೇಜು ಹಗ್ಗಜಗ್ಗಾಟ ಪಂದ್ಯಾವಳಿ

blank

ನಿಪ್ಪಾಣಿ: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ(ವಿಟಿಯು) ಅಂತರಕಾಲೇಜು ಪುರುಷರ ಹಗ್ಗಜಗ್ಗಾಟ ಪಂದ್ಯಾವಳಿಯಲ್ಲಿ ವಿಎಸ್‌ಎಂ ಸೋಮಶೇಖರ ಆರ್.ಕೋಠಿವಾಲೆ ತಾಂತ್ರಿಕ ಮಹಾವಿದ್ಯಾಲಯ(ವಿಎಸ್‌ಎಂಎಸ್‌ಆರ್‌ಕೆಐಟಿ) ದ್ವಿತೀಯ ಸ್ಥಾನ ಗಳಿಸಿತು.

ವಿಟಿಯೂ ಮತ್ತು ವಿಎಸ್‌ಎಂಎಸ್‌ಆರ್‌ಕೆಐಟಿ ಆಶ್ರಯದಲ್ಲಿ ಈಚೆಗೆ ವಿಎಸ್‌ಎಂಎಸ್‌ಆರ್‌ಕೆಐಟಿಯಲ್ಲಿ ಪಂದ್ಯಾವಳಿ ಜರುಗಿತು. ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದ ವಿಎಸ್‌ಎಂಎಸ್‌ಆರ್‌ಕೆಐಟಿಯ ಪುರುಷರ ತಂಡವು ತುಮಕೂರಿನ ಅಕ್ಷಯ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆಯಲಿರುವ ರಾಜ್ಯಮಟ್ಟದ ಪಂದ್ಯಾವಳಿಗೆ ಆಯ್ಕೆಗೊಂಡಿದೆ.

ಪ್ರಶಸ್ತಿ ಪಡೆದ ತಂಡಕ್ಕೆ ವಿದ್ಯಾ ಸಂವರ್ಧಕ ಮಂಡಳದ ಅಧ್ಯಕ್ಷ ಚಂದ್ರಕಾಂತ ಕೋಠಿವಾಲೆ, ಎಂಬಿಎ-ಎಂಸಿಎ ಮಹಾವಿದ್ಯಾಲಯದ ಉಪಾಧ್ಯಕ್ಷ ಪಪ್ಪು ಪಾಟೀಲ, ಕಾರ್ಯದರ್ಶಿ ಸಮೀರ ಬಾಗೇವಾಡಿ, ಸಂಚಾಲಕ ಅವಿನಾಶ ಪಾಟೀಲ, ವಕೀಲ ಸಂಜಯ ಶಿಂತ್ರೆ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ಸಿಇಒ ಡಾ.ಸಿದ್ದಗೌಡ ಪಾಟೀಲ, ಪ್ರಾಚಾರ್ಯ ಡಾ.ಉಮೇಶ ಪಾಟೀಲ, ದೈಹಿಕ ಶಿಕ್ಷಣ ಸಂಚಾಲಕ ಪ್ರವೀಣ ಮಾನೆ ಇತರರಿದ್ದರು.

Share This Article

ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್​ ವಿಧಾನ | Recipe

ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…

ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ | Health Tips

ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…

ಟೊಮೆಟೊ ಸೇವನೆ ಕ್ಯಾನ್ಸರ್​ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips

ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್​​.…