ವಿದ್ಯಾರ್ಥಿಗಳಲ್ಲಿ ಆತ್ಮ ವಿಶ್ವಾಸ ಮೂಡಿಸಿ

blank

ಕುಮಟಾ: ತಾಲೂಕಿನಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ನಿರ್ವಹಿಸುವ ವಿಶ್ವಾಸವಿದೆ. ಹಾಗೆಯೇ ಮಕ್ಕಳಲ್ಲೂ ಧೈರ್ಯದಿಂದ ಪರೀಕ್ಷೆ ಬರೆಯಲು ಆತ್ಮವಿಶ್ವಾಸ ಮೂಡಿಸುವ ಕೆಲಸ ಆಗಬೇಕಿದೆ ಎಂದು ಶಾಸಕ ದಿನಕರ ಶೆಟ್ಟಿ ಹೇಳಿದರು.

ತಾಪಂ ಸಭಾಭವನದಲ್ಲಿ ಶನಿವಾರ ಆಯೋಜಿಸಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು. ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸೂಕ್ಷ್ಮತೆ ಹಾಗೂ ಗಂಭೀರತೆಯಿಂದ ನಿಭಾಯಿಸಬೇಕಿದೆ. ಸಾರಿಗೆ ಇಲಾಖೆಯ ಜವಾಬ್ದಾರಿ ಅತ್ಯಂತ ಮಹತ್ವದ್ದಾಗಿದೆ ಎಂದರು.

ಬಿಇಒ ರಾಜೇಂದ್ರ ಭಟ್ ಮಾತನಾಡಿ, ತಾಲೂಕಿನಲ್ಲಿ ಹೆಚ್ಚುವರಿ 2 ಪರೀಕ್ಷಾ ಕೇಂದ್ರ ಸೇರಿ ಒಟ್ಟು 11 ಕೇಂದ್ರಗಳಲ್ಲಿ 1988 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಸರ್ಕಾರಿ ಬಸ್​ನಲ್ಲಿ 1075 ಮಕ್ಕಳು, ಖಾಸಗಿ ಶಾಲಾ ವಾಹನ ಬಾಡಿಗೆಗೆ ಪಡೆದು 97 ಮ್ಮಕಳು, ಖಾಸಗಿ ಶಾಲಾ ವಾಹನದಲ್ಲಿ ಆಡಳಿತ ಮಂಡಳಿ ಕರೆತರುವ 67 ಮಂದಿ, ಕಾಲ್ನಡಿಗೆಯಲ್ಲಿ 99 ಮಂದಿ, ಸೈಕಲ್-ಆಟೋ ಮೂಲಕ 46 ಮಂದಿ, ಪಾಲಕರ ಜೊತೆ 598 ಮಂದಿ ಹಾಗೂ ವಸತಿ ನಿಲಯದ 6 ಮಂದಿ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗವಹಿಸಲಿದ್ದಾರೆ. ಪರೀಕ್ಷೆ ನಿರ್ವಹಣೆಗೆ ಒಟ್ಟೂ 261 ಅಧಿಕಾರಿ ಹಾಗೂ ಸಿಬ್ಬಂದಿ, ಸಹಾಯವಾಣಿಯಲ್ಲಿ 27 ಮಂದಿ ಕಾರ್ಯನಿರ್ವಹಿಸಲಿದ್ದಾರೆ ಎಂಬ ಎಂದರು.

ಉಪವಿಭಾಗಾಧಿಕಾರಿ ಅಜಿತ್ ಎಂ.ರೈ, ತಹಸೀಲ್ದಾರ್ ಮೇಘರಾಜ ನಾಯ್ಕ, ವಾಕರಸಾ ಘಟಕ ವ್ಯವಸ್ಥಾಪಕಿ ಸೌಮ್ಯಾ ನಾಯಕ, ತಾಪಂ ಇಒ ಸಿ.ಟಿ. ನಾಯ್ಕ, ಸಿಪಿಐ ಪರಮೇಶ್ವರ ಗುನಗಾ, ಮುಖ್ಯಾಧಿಕಾರಿ ಸುರೇಶ. ಎಂ.ಕೆ. ಬಿಆರ್​ಸಿ ರೇಖಾ ನಾಯ್ಕ, ಜಿಪಂ ಇಓ ರಾಮದಾಸ ಗುನಗಿ ಇನ್ನಿತರರು ಇದ್ದರು.

Share This Article

ಚಳಿಗಾಲದಲ್ಲಿ ಅಲೋವೆರಾ ಜೆಲ್ ಅನ್ನು ತಲೆಗೆ ಹಚ್ಚಿಕೊಳ್ಳಬಹುದೇ? aloe vera gel benefits

aloe vera gel benefits : ಚಳಿಗಾಲದಲ್ಲಿ ತಲೆಹೊಟ್ಟು ಸಾಮಾನ್ಯ. ಚಳಿಗಾಲದಲ್ಲಿ ಶುಷ್ಕ ಗಾಳಿಯು ನಮ್ಮ…

ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದು ಚಮಚ ತೆಂಗಿನೆಣ್ಣೆ ಕುಡಿದರೆ ಏನಾಗುತ್ತೆ ಗೊತ್ತಾ? Coconut Oil Benefits

Coconut Oil Benefits:  ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ತಿನ್ನುವ ಆಹಾರವೇ ನಮ್ಮ ಆರೋಗ್ಯವನ್ನು ನಿರ್ಧರಿಸುತ್ತದೆ.…

ಕಣ್ಣಿಗೊಂದು ಸವಾಲ್…ಈ ಫೋಟೋದಲ್ಲಿರುವ ಹಾವನ್ನು ಗುರುತಿಸಬಲ್ಲಿರಾ? Optical Illusion..

Optical Illusion: ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ…