ವಿಮಾನ ಮೂಲಕ ಬೆಂಗಳೂರಿಗೆ ಅಂಗಾಂಗ

blank

ಧಾರವಾಡ: ಮಿದುಳು ನಿಷ್ಕ್ರಿಯವಾಗಿದ್ದ ಮಹಿಳೆಯೊಬ್ಬರ ಅಂಗಾಂಗಗಳನ್ನು ಕುಟುಂಬದವರ ಒಪ್ಪಿಗೆ ಮೇರೆಗೆ ದಾನವಾಗಿ ಪಡೆದು ಶನಿವಾರ ಇಲ್ಲಿಯ ಎಸ್​ಡಿಎಂ ಆಸ್ಪತ್ರೆಯಿಂದ ಹುಬ್ಬಳ್ಳಿಗೆ ಕೊಂಡೊಯ್ದು ಏರ್​ಲಿಫ್ಟ್ ಮಾಡುವ ಮೂಲಕ ಬೆಂಗಳೂರಿಗೆ ರವಾನಿಸಿದ್ದು, ಈ ಭಾಗದಲ್ಲಿ ಇದೊಂದು ಅಪರೂಪದ ಸಾಧನೆ ಎನಿಸಿದೆ.

ಉತ್ತರ ಕನ್ನಡ ಜಿಲ್ಲೆ ಶಿರಸಿಯ 54 ವರ್ಷದ ಸುನಂದಾ ಸತೀಶ ನಾಯ್ಕ ಎಂಬುವರು ಜೂ. 23ರಂದು ಮನೆಯಲ್ಲಿ ಬಿದ್ದಿದ್ದರಿಂದ ತಲೆಗೆ ತೀವ್ರ ಪೆಟ್ಟಾಗಿತ್ತು. ಅವರನ್ನು ಚಿಕಿತ್ಸೆಗಾಗಿ ನಗರದ ಎಸ್​ಡಿಎಂ ಆಸ್ಪತ್ರೆಗೆ ಕರೆತಂದು ದಾಖಲಿಸಲಾಗಿತ್ತು. ಎರಡು ದಿನಗಳ ಚಿಕಿತ್ಸೆಯ ನಂತರವೂ ಚೇತರಿಕೆಯಾಗದೆ ಮಿದುಳು ನಿಷ್ಕ್ರಿಯವಾಗಿತ್ತು. ಜೂ. 25ರ ಸಂಜೆ ಕುಟುಂಬದವರೊಂದಿಗೆ ರ್ಚಚಿಸಿದ ವೈದ್ಯರು, ಮಿದುಳು ನಿಷ್ಕ್ರಿಯವಾಗಿರುವುದನ್ನು ದೃಢಪಡಿಸಿದರು. ಕುಟುಂಬದವರ ಒಪ್ಪಿಗೆಯ ನಂತರ ಕಾನೂನಾತ್ಮಕವಾಗಿ ಅಂಗಾಂಗಳಾದ ಯಕೃತ್, 2 ಕಿಡ್ನಿ, 2 ಕಣ್ಣುಗಳನ್ನು ಬೇರ್ಪಡಿಸಿದರು. ಸರ್ಕಾರಿ ಸ್ವಾಮ್ಯದ ಸಂಸ್ಥೆಯಾದ ‘ಜೀವ ಸಾರ್ಥಕತೆ’ಯಲ್ಲಿ ನೋಂದಾಯಿಸಿದವರ ಅಂಗಾಂಗ ಕಸಿಗಾಗಿ ಜೀವನ್ಮರಣ ಹೋರಾಟ ನಡೆಸುತ್ತಿರುವ ಅದೇ ರಕ್ತದ ಗುಂಪಿನ ವ್ಯಕ್ತಿಗಳಿಗೆ ಕಸಿ ಮಾಡಲು ಕಳುಹಿಸಲು ನಿರ್ಧರಿಸಲಾಯಿತು.

ಎಸ್​ಡಿಎಂ ಆಸ್ಪತ್ರೆಯಿಂದ ಹುಬ್ಬಳ್ಳಿ ವಿಮಾನ ನಿಲ್ದಾಣದವರೆಗೆ ಅಂಗಾಂಗವನ್ನು ಆಂಬುಲೆನ್ಸ್​ನಲ್ಲಿ ಸಾಗಿಸಬೇಕಿತ್ತು. ಎಸ್​ಡಿಎಂ ಆಸ್ಪತ್ರೆಯವರು ಶನಿವಾರ ಬೆಳಗ್ಗೆ ಜೀರೋ ಟ್ರಾಫಿಕ್ ವ್ಯವಸ್ಥೆ ಕಲ್ಪಿಸುವಂತೆ ಪೊಲೀಸ್ ಇಲಾಖೆಯನ್ನು ಕೋರಿದ್ದರು. ಬೆಳಗ್ಗೆ 10.40ಕ್ಕೆ ಎಸ್​ಡಿಎಂ ಆಸ್ಪತ್ರೆಯಿಂದ ಹೊರಟ ಅಂಗಾಂಗವನ್ನು ಹೊತ್ತ ಆಂಬುಲೆನ್ಸ್, ವಿಮಾನ ನಿಲ್ದಾಣದವರೆಗಿನ 16 ಕಿ.ಮೀ. ದೂರವನ್ನು ಕೇವಲ ಅಂದಾಜು 12 ನಿಮಿಷಗಳಲ್ಲಿ ಕ್ರಮಿಸಿತು.

ಯಶಸ್ವಿ ಕಸಿ ನಿರ್ವಹಿಸಿದ ವೈದ್ಯರ ತಂಡ, ಸಹಕರಿಸಿದ ಜೀವ ಸಾರ್ಥಕತೆ ಮತ್ತು ಮೋಹನ್ ಫೌಂಡೆಶನ್​ಗೆ ಎಸ್​ಡಿಎಂ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ. ನಿರಂಜನ್ ಕುಮಾರ ಅಭಿನಂದನೆ ಸಲ್ಲಿಸಿದ್ದಾರೆ. ಅಂಗಾಂಗ ದಾನ ಮಾಡಿದ ಕುಟುಂಬದ ಸದಸ್ಯರು, ತುರ್ತು ಸಮಯದಲ್ಲಿ ಜೀರೋ ಟ್ರಾಫಿಕ್​ಗೆ

ಸಹಕರಿಸಿದ ಬಿಆರ್​ಟಿಎಸ್ ಪ್ರಾದೇಶಿಕ ವ್ಯವಸ್ಥಾಪಕ ಗಣೇಶ ರಾಠೋಡ ಹಾಗೂ ಸಿಬ್ಬಂದಿ ಮತ್ತು ಉಪ ಪೊಲೀಸ್ ಆಯುಕ್ತ ರಾಮರಾಜನ್ ಮತ್ತು ತಂಡದವರಿಗೆ ಕೃತಜ್ಞತೆ ತಿಳಿಸಿದ್ದಾರೆ.

ಸಾವಿನಲ್ಲೂ ಸಾರ್ಥಕತೆ

ಎರಡು ಕಣ್ಣು, ಎರಡು ಕಿಡ್ನಿಗಳನ್ನು ಎಸ್​ಡಿಎಂ ಆಸ್ಪತ್ರೆಯಲ್ಲಿ ನೋಂದಾಯಿಸಿಕೊಂಡಿದ್ದ ವ್ಯಕ್ತಿಗಳಿಗೆ ಕಸಿ ಮಾಡಲಾಯಿತು. ನೆಫ್ರೋಲಜಿ, ಯುರೋಲಜಿ, ಪ್ಲಾಸ್ಟಿಕ್ ಸರ್ಜರಿ, ಶಸ್ತ್ರಚಿಕಿತ್ಸಾ ವಿಭಾಗ ಹಾಗೂ ಅರವಳಿಕೆ ವಿಭಾಗದ ವೈದ್ಯರ ತಂಡದವರು ಅಂಗಾಂಗ ಕಸಿಯನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಯಕೃತ್ತನ್ನು ಬೆಂಗಳೂರಿನ ಆಸ್ಟರ್ ಆರ್.ವಿ. ಆಸ್ಪತ್ರೆಗೆ ಏರ್ ಆಂಬುಲೆನ್ಸ್ ಮೂಲಕ ಕಳುಹಿಸಲಾಯಿತು.

Share This Article

ಅಪ್ಪಿತಪ್ಪಿಯೂ ಈ ಆಹಾರಗಳನ್ನು ತುಪ್ಪದೊಂದಿಗೆ ಸೇವಿಸಬೇಡಿ; ಉತ್ತಮ ಆರೋಗ್ಯಕ್ಕಾಗಿ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಭಾರತೀಯ ಪಾಕಪದ್ಧತಿಯಲ್ಲಿ ತುಪ್ಪಕ್ಕೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ಆಯುರ್ವೇದದಲ್ಲಿ ತುಪ್ಪವು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ…

ಕಾಫಿ ಕುಡಿಯುವಾಗ ಈ ತಪ್ಪುಗಳನ್ನು ಎಂದಿಗೂ ಮಾಡಬೇಡಿ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಪ್ರಪಂಚದಾದ್ಯಂತ ಕಾಫಿ ಪ್ರಿಯರನ್ನು ಕಾಣಬಹುದು. ಇಲ್ಲಿಯವರೆಗೆ ಕಾಫಿಯ ಬಗ್ಗೆ ಸಾಕಷ್ಟು ಸಂಶೋಧನೆಗಳು ನಡೆದಿದ್ದು, ಇದು ಅದರ…

ಕಪ್ಪು ದ್ರಾಕ್ಷಿ vs ಹಸಿರು ದ್ರಾಕ್ಷಿ.. ಆರೋಗ್ಯಕ್ಕೆ ಯಾವುದು ಉತ್ತಮ..? grapes

grapes: ದ್ರಾಕ್ಷಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದು. ಈ ಹಣ್ಣುಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಆದರೆ ಹಸಿರು…