ವಿವಾದಕ್ಕೆ ಅವಕಾಶವಿಲ್ಲದಂತೆ ಕಾರ್ಯನಿರ್ವಹಿಸಲಿ

blank

ಸಿದ್ದಾಪುರ: ವಿತಂಡವಾದಕ್ಕೆ ಅವಕಾಶವಿಲ್ಲದಂತೆ ಒಂದೇ ಮನಸ್ಥಿತಿಯವರಲ್ಲಿ ಸಂಭಾಷಣೆ ನಡೆಸಿ, ಸ್ಪಷ್ಟವಾದ ನಿರ್ಧಾರ ಕೈಗೊಳುವುದಕ್ಕೆ ಸಂಭಾಷಾ ಪರಿಷತ್ ಉಪಯೋಗವಾಗಲಿ ಎಂದು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಕೆಕ್ಕಾರ ನಾಗರಾಜ ಭಟ್ಟ ಹೇಳಿದರು.

ಸ್ಥಳೀಯ ಶಿಕ್ಷಣ ಪ್ರಸಾರಕ ಸಮಿತಿಯ ಧನ್ವಂತರಿ ಆಯುರ್ವೆದ ಮಹಾವಿದ್ಯಾಲಯದಲ್ಲಿ ಸೋಮವಾರ ಸಂಭಾಷಾ ಪರಿಷತ್(ಸಭಾಭವನ) ಉದ್ಘಾಟಿಸಿ ಅವರು ಮಾತನಾಡಿದರು.

ಸಂಭಾಷಾ ಪರಿಷತ್​ನಲ್ಲಿ ಆರೋಗ್ಯಕರ ಚರ್ಚೆ, ಪರಸ್ಪರ ಜ್ಞಾನ ವಿನಿಮಯ, ವಚನಶಕ್ತಿ ವೃದ್ಧಿ, ಸಂದೇಹ ನಿವಾರಣೆಗೆ ಸಂಭಾಷಾ ಪರಿಷತ್ತು ಅವಕಾಶ ನೀಡಿ ಹೆಸರಿಗೆ ಸಾರ್ಥಕತೆ ತರುವಂತಾಗಬೇಕು ಎಂದು ಹೇಳಿದರು.

ನವೀಕರಣಗೊಂಡ ಜ್ವರ ಹೊರ ರೋಗಿ ವಿಭಾಗವನ್ನು ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಗಣೇಶ ಭಟ್ಟ ಉದ್ಘಾಟಿಸಿ, ಕರೊನಾ ಭಯದಲ್ಲೇ ಓಡಾಡುತ್ತಿದ್ದೇವೆ. ಕೋವಿಡ್ ಜತೆಯೇ ಬದುಕುವ ವ್ಯವಸ್ಥೆಯನ್ನು ಅನಿವಾರ್ಯವಾಗಿ ಅಳವಡಿಸಿಕೊಳ್ಳಬೇಕಾಗಿದೆ. ಅಗತ್ಯ ವೈದ್ಯರು, ವೈದ್ಯಕೀಯ ವ್ಯವಸ್ಥೆಯನ್ನು ಸಮಯೋಚಿತವಾಗಿ ಧನ್ವಂತರಿ ಆಯುರ್ವೆದ ಮಹಾವಿದ್ಯಾಲಯದಲ್ಲಿ ಅಳವಡಿಸಿ ಜನರಿಗೆ ಅನುಕೂಲ ಕಲ್ಪಿಸಿಕೊಡುತ್ತಿರುವುದು ಸ್ವಾಗತಾರ್ಹ ಎಂದರು.

ಶಿಕ್ಷಣ ಪ್ರಸಾರಕ ಸಮಿತಿ ಉಪಾಧ್ಯಕ್ಷ ಡಾ. ಶಶಿಭೂಷಣ ಹೆಗಡೆ ಮಾತನಾಡಿ, ಸಂಭಾಷಾ ಪರಿಷತ್ ಸಭಾಭವನದಲ್ಲಿ ಸ್ಕಿ›ೕನ್ ವ್ಯವಸ್ಥೆ, ಪ್ರತ್ಯೇಕ ಧ್ವನಿವರ್ಧಕ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಜ್ವರ ಹೊರರೋಗಿ ವಿಭಾಗ ಪ್ರಾರಂಭದ ಜತೆ ಧನ್ವಂತರಿ ಆಸ್ಪತ್ರೆಗೆ ಬರುವ ರೋಗಿಗಳ ಇತರೆ ಅವಶ್ಯಕತೆ ಪೂರೈಸಲಾಗುತ್ತದೆ ಎಂದರು.

ಸಮಿತಿ ಅಧ್ಯಕ್ಷ ವಿನಾಯಕರಾವ್ ಹೆಗಡೆ ಉಪಸ್ಥಿತರಿದ್ದರು. ಪ್ರಾಚಾರ್ಯು ಡಾ. ರೂಪಾ ಭಟ್ಟ, ಪೊ›.ರಾಘವೇಂದ್ರ ಎಲ್, ಪೊ›. ಶ್ರೀಕಾಂತ ಭಟ್ಟ ನಿರ್ವಹಿಸಿದರು.

Share This Article

ನಿಮ್ಮ ನೆಚ್ಚಿನ ಹಣ್ಣುನ್ನು ಆಯ್ಕೆ ಮಾಡಿ.. ನಿಮ್ಮ ವ್ಯಕ್ತಿತ್ವವನ್ನು ತಿಳಿದುಕೊಳ್ಳಿ!.. Personality Test

Personality Test : ಒಬ್ಬ ವ್ಯಕ್ತಿ ಹೇಗಿದ್ದಾನೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ತುಂಬಾ ಕಷ್ಟ. ವ್ಯಕ್ತಿಯ ವ್ಯಕ್ತಿತ್ವವನ್ನು…

ಚಾಣಕ್ಯ ನೀತಿಯಲ್ಲಿನ ಈ 4 ವಿಷಯಗಳನ್ನು ನೆನಪಿನಲ್ಲಿಡಿ; ಸಂಬಂಧದಲ್ಲಿ ಮೋಸ ಹೋದ ನೋವನ್ನು ನೀವು ಅನುಭವಿಸಬೇಕಿಲ್ಲ.. | Chanakya Niti

ಕಾಲಾನಂತರದಲ್ಲಿ ಜನರ ಬದಲಾಗುತ್ತಿರುವ ಆಲೋಚನೆಗಳಲ್ಲಿ ನಿಜವಾದ ಪ್ರೀತಿ ಕಳೆದುಹೋಗುತ್ತಿದೆ. ಈ ಜಗತ್ತಿನಲ್ಲಿ ನಿಮ್ಮನ್ನು ಉತ್ಸಾಹದಿಂದ ಪ್ರೀತಿಸುವ…

ಹರಳೆಣ್ಣೆ ನೀರಿನಿಂದ ಎಷ್ಟೆಲ್ಲಾ ಪ್ರಯೋಜನ ಇದೆ ಗೊತ್ತಾ?; ತಿಳಿದ್ರೆ ನೀವು ಮಿಸ್​ ಮಾಡೋದೆ ಇಲ್ಲ| Health Tips

ಹರಳೆಣ್ಣೆಯನ್ನು ಆರೋಗ್ಯ ಮತ್ತು ಸೌಂದರ್ಯಕ್ಕಾಗಿ ಬಳಸಲಾಗುತ್ತದೆ ಎಂಬುದು ತಿಳಿದಿದೆಯೇ. ಇದರಲ್ಲಿರುವ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಚರ್ಮ…