ವೃತ್ತಿಯೊಂದಿಗೆ ಕಾಯಕ ದಾಸೋಹ ಸೇವೆ

blank

ಸಂಡೂರು: ನಿಜಶರಣ ಅಂಬಿಗರ ಚೌಡಯ್ಯ ವಚನಗಳು ಮತ್ತು ನೇರ ಹಾಗೂ ನಿಷ್ಠುರ ನಡೆಯಿಂದ ಖ್ಯಾತಿ ಗಳಿಸಿದ್ದರು ಎಂದು ತಹಸೀಲ್ದಾರ್ ಅನಿಲ್ ಕುಮಾರ್ ಹೇಳಿದರು.

ತಾಲೂಕು ಕಚೇರಿಯಲ್ಲಿ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದಲ್ಲಿ ಮಂಗಳವಾರ ಮಾತನಾಡಿದರು. ಬಸವಣ್ಣ ಅವರ ಅನುಯಾಯಿಯಾಗಿದ್ದ ಅಂಬಿಗರ ಚೌಡಯ್ಯ ಮೂಲ ವೃತ್ತಿ ಮಾಡುತ್ತಲೇ ಕಾಯಕ ದಾಸೋಹ ಸೇವೆ ಅನುಸರಿಸಿದರು ಎಂದರು.

ಸಮಾಜದ ತಾಲೂಕು ಅಧ್ಯಕ್ಷ ಆರ್.ರಾಘವೇಂದ್ರ ಮಾತನಾಡಿ, ಎಲ್ಲರ ಸಹಕಾರವಿದ್ದರೆ ಮಾತ್ರ ಏನನ್ನಾದರೂ ಸಾಧಿಸಲು ಸಾಧ್ಯ. ಸಮಾಜದ 40 ಗುಂಟೆ ಜಾಗವಿದ್ದು, ಅದರಲ್ಲಿ ಸಮುದಾಯ ಭವನ ನಿರ್ಮಾಣ ಆಗಬೇಕು ಎಂಬುದು ನಮ್ಮೆಲ್ಲರ ಬಯಕೆಯಾಗಿದೆ. ಈ ಹಿನ್ನೆಲೆಯಲ್ಲಿ ಸಂಸದ ಈ.ತುಕಾರಾಮ್ ಹಾಗೂ ಶಾಸಕಿ ಅನ್ನಪೂರ್ಣ ತುಕಾರಾಮ್ ಅವರಿಗೆ ಮನವಿ ಮಾಡಿರುವುದಾಗಿ ತಿಳಿಸಿದರು.

ಬಿ.ಬಸವರಾಜ ಉಪನ್ಯಾಸ ನೀಡಿದರು. ಸಮಾಜದ ಉಪಾಧ್ಯಕ್ಷ ನಾಗರಾಜ, ಕಾರ್ಯದರ್ಶಿ ಸಂತೋಷ್, ಖಜಾಂಚಿ ಶಿವಕುಮಾರ್, ಪ್ರಮುಖರಾದ ಹುಲುಗಪ್ಪ, ಎ.ಗಣೇಶ, ಪರಶುರಾಮ, ಪೂರ್ಣಿಮಾ, ವಿನೋದಮ್ಮ, ಶಾರದಮ್ಮ, ನೀಲಮ್ಮ ಇದ್ದರು.

Share This Article

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…

ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips

ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…