ವೈಕುಂಠ ಏಕಾದಶಿ ಸಂಭ್ರಮ; ಭದ್ರಾವತಿಯಲ್ಲಿ ತಡರಾತ್ರಿಯಿಂದಲೇ ಕ್ಯೂ

blank

ಭದ್ರಾವತಿ: ಹಳೇನಗರದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇವಾಲಯದಲ್ಲಿ ಸೋಮವಾರ ವೈಕುಂಠ ಏಕಾದಶಿಯನ್ನು ಶ್ರದ್ಧಾಭಕ್ತಿ, ವಿಜೃಂಭಣೆಯಿಂದ ಆಚರಿಸಲಾಯಿತು. ತಡರಾತ್ರಿ 2 ಗಂಟೆಯಿಂದಲೆ ಸರತಿ ಸಾಲಿನಲ್ಲಿ ಭಕ್ತರು ಕಾದು ದೇವರ ದರ್ಶನ ಪಡೆದರು.
ದೇವಾಲಯದ ಪ್ರಧಾನ ಅರ್ಚಕ ರಂಗನಾಥಶರ್ಮ ಅವರ ಪೌರೋಹಿತ್ಯದಲ್ಲಿ ಬೆಳಗ್ಗೆ ಮೂಲದೇವರಿಗೆ ವಿಶೇಷಾಲಂಕಾರ ಮಾಡಿದ ನಂತರ ನಿತ್ಯಪೂಜಾದಿಗಳನ್ನು ನೆರವೇರಿಸಲಾಯಿತು. ನಂತರ ದೇವಾಲಯದ ಸುತ್ತ ಭೂದೇವಿ, ಶ್ರೀದೇವಿ ಸಹಿತನಾದ ಶ್ರೀನಿವಾಸ ದೇವರ ಉತ್ಸವ ಮೂರ್ತಿಯನ್ನು ಚಂಡೆವಾದ್ಯ, ಮಂಗಳವಾದ್ಯ ಸಹಿತವಾಗಿ ಉತ್ಸವ ನಡೆಸಲಾಯಿತು. ದೇವಾಲಯದ ಆವರಣದಲ್ಲಿ ನಿರ್ಮಿಸಲಾಗಿರುವ ಕೃತಕ ವಿದ್ಯುತ್ ದೀಪಾ ಅಲಂಕೃತ ರಾಜಗೋಪುರದ ವೈಕುಂಠ ಮಹಾದ್ವಾರದ ಪೂಜೆ ಮಾಡಿ, ಬೆಳಗಿನ ಜಾವ 4.30ಕ್ಕೆ ವೈಕುಂಠದ ಸಪ್ತದ್ವಾರಗಳನ್ನು ಓಂ ನಾರಾಯಣ ನಾಮಸ್ಮರಣೆಯೊಂದಿಗೆ ಒಂದೊಂದಾಗಿ ತೆರೆಯಲಾಯಿತು. ಕೊನೆಯ ದ್ವಾರ ತೆರೆದು ಶ್ರೀ ಲಕ್ಷ್ಮೀ ಸಹಿತನಾದ ವೈಕುಂಠನಾಥನ ದರ್ಶನವಾಗುತ್ತಿದ್ದಂತೆ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಭಕ್ತರು ಗೋವಿಂದಾ ಗೋವಿಂದ ಎಂದು ಸ್ಮರಣೆ ಮಾಡುತ್ತ ದರ್ಶನ ಪಡೆದರು. ಬಳಿಕ ಭೂದೇವಿ ಶ್ರೀದೇವಿ ಸಹಿತನಾದ ಶ್ರೀ ಶ್ರೀನಿವಾಸ ದೇವರ ದೇವರ ಉತ್ಸವ ಮೂರ್ತಿಯನ್ನು ವೈಕುಂಠದ ರಾಜಗೋಪುರದ ಪ್ರವೇಶ ದ್ವಾರದ ಬಳಿ ಉಯ್ಯಲೆಯಲ್ಲಿ ಪ್ರತಿಷ್ಠಾಪಿಸಲಾಯಿತು.
ಮಂಗಳವಾದ್ಯ ಸಹಿತವಾಗಿ ವಿಷ್ಣು ಸಹಸ್ರನಾಮ ಪಠಣದೊಂದಿಗೆ ಗೋವಿಂದ ಗೋಪಾಲ ಎನ್ನುತ್ತ ಮಕ್ಕಳು, ಯುವತಿಯರು ಕೋಲಾಟಾಡುತ್ತ ರಥಬೀದಿಯಲ್ಲಿ ಶ್ರೀ ಗೋದಾದೇವಿಯ ಉತ್ಸವದಲ್ಲಿ ಭಾಗವಹಿಸಿದ್ದರು. ವೇದ ಪಾಠಶಾಲೆ ವಿದ್ಯಾರ್ಥಿಗಳು ವೇದ ಪಠಣ ಮಾಡಿದರು. ವಿಷ್ಣು ಸಹಸ್ರನಾಮ ಮಹಿಳಾ ಮಂಡಳಿಯವರು ವಿಷ್ಣು ಸಹಸ್ರನಾಮ ಪಠಿಸಿದರು.
ಮಿಲಿಟರಿ ಕ್ಯಾಂಪ್ ಶ್ರೀ ಶ್ರೀನಿವಾಸ ದೇವಸ್ಥಾನದಲ್ಲಿಯೂ ಸ್ವಾಮಿಗೆ ವಿಶೇಷ ಅಲಂಕಾರ ಮಾಡಿ ಭಕ್ತರಿಗೆ ವೈಕುಂಠ ನಾಥನ ದರ್ಶನಕ್ಕೆ ಅವಕಾಶ ಮಾಡಿಕೊಡಲಾಯಿತು. ಭಕ್ತರು ಬೆಳಗ್ಗಿನಿಂದಲೇ ಸರದಿ ಸಾಲಿನಲ್ಲಿ ನಿಂತು ದರ್ಶನ ಪಡೆದರು.

blank
Share This Article

ಅಧಿಕ ನೀರು ಕುಡಿಯುವುದರಿಂದ ಈ 6 ದೊಡ್ಡ ಸಮಸ್ಯೆಗಳು ಕಾಡಬಹುದಂತೆ! | Drinking water

Drinking water:ಸಾಮಾನ್ಯವಾಗಿ ನೀರು ಕುಡಿಯವುದರಿಂದ ಅನೇಕ ರೋಗದ ಸಮಸ್ಯೆಗಳು ದೂರುವಾಗುತ್ತದೆ. ಅಲ್ಲದೆ, ಆರೋಗ್ಯಕ್ಕೆ ಊಟ ಎಷ್ಟು…

ಪದೇಪದೆ ವಿವಾಹದ ಪ್ರಸ್ತಾಪಗಳು ಮುರಿದು ಬೀಳುತ್ತಿದೆಯೇ? ಈ ಕ್ರಮಗಳು ಅನುಸರಿಸಿ; ಮದುವೆಯ ಅಡೆತಡೆಗಳನ್ನು ನಿವಾರಿಸಿ | Marriage Proposals

Marriage Proposals : ಜೀವನದ ಅತಿದೊಡ್ಡ ತಿರುವು ಎಂದ್ರೆ ಅದು ಮದುವೆ. ಮದುವೆ ಎಂದ್ರೆ ಎಲ್ಲರಿಗೂ…

ಸ್ನಾಕ್ಸ್​ ತಿನ್ನುವುದರಿಂದಲೂ ತೂಕ ಇಳಿಸಿಕೊಳ್ಳಬಹುದು!: ಈ ಸಿಂಪಲ್​ ಹೆಲ್ತ್​​ ಟಿಪ್ಸ್​ ಫಾಲೋ ಮಾಡಿ.. | Weight Lose

Weight Lose: ಸರಿಯಾದ ಆಯ್ಕೆಗಳೊಂದಿಗೆ ಸ್ನಾಕ್ಸ್ ತಿನ್ನುವುದರಿಂದಲೂ ಕೂಡ ತೂಕ ಇಳಿಕೆಯಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ…