ಶ್ರೀನುಗ್ಗೇಳ್ಳಮ್ಮ, ಶ್ರೀ ಕೆಂಪಮ್ಮ ದೇವಿ ರಥೋತ್ಸವ

blank

ನುಗ್ಗೇಹಳ್ಳಿ: ಪುರಾಣ ಪ್ರಸಿದ್ಧ ಗ್ರಾಮ ದೇವತೆ ಶ್ರೀನುಗ್ಗೇಳ್ಳಮ್ಮ, ಶ್ರೀ ಕೆಂಪಮ್ಮ ದೇವಿ ರಥೋತ್ಸವ ಭಾನುವಾರ ರಾತ್ರಿ ಸಾವಿರಾರು ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಿತು.

blank

ಜಾತ್ರಾ ಮಹೋತ್ಸವ ಅಂಗವಾಗಿ ಶ್ರೀನುಗ್ಗೇಳ್ಳಮ್ಮ ಶ್ರೀ ಕೆಂಪಮ್ಮದೇವಿಗೆ ಬೆಳಗ್ಗೆಯಿಂದಲೇ ಅಭಿಷೇಕ ಹೂವಿನ ಅಲಂಕಾರ ಸೇರಿದಂತೆ ವಿಶೇಷ ಪೂಜೆಗಳು ನಡೆದವು.

ಬೆಂಗಳೂರು ಸೇರಿದಂತೆ ಈ ಭಾಗದ ಹಳ್ಳಿಗಳಾದ ಬಸವನಪುರ, ಮುದ್ದನಹಳ್ಳಿ ಅಕ್ಕನಹಳ್ಳಿ ಕ್ರಾಸ್, ಹೂವಿನಹಳ್ಳಿ, ಸಮುದ್ರಹಳ್ಳಿ, ವಿರುಪಾಕ್ಷಪುರ ಜಿ.ಎನ್.ಕೊಪ್ಪಲು, ಸೇರಿದಂತೆ ಅನೇಕ ಗ್ರಾಮಗಳಿಂದ ಸಾವಿರಾರು ಭಕ್ತರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು. ಸಂಪ್ರದಾಯದಂತೆ ಶ್ರೀನುಗ್ಗೇಳ್ಳಮ್ಮ ಶ್ರೀ ಕೆಂಪಮ್ಮಗೆ ರಾತ್ರಿ ಮಹಾ ಮಂಗಳಾರತಿ ನಂತರ ಸೋಮನ ಕುಣಿತದೊಂದಿಗೆ ದೇವಾಲಯದ ಆವರಣದಲ್ಲಿ ಉತ್ಸವ ನಡೆಸಿ ನಂತರ ರಥದ ಸುತ್ತ ಪ್ರದಕ್ಷಣೆ ನಡೆಸಿ ಬಲಿ ಅನ್ನಹಾಕಿ ದೇವರನ್ನು ರಥದಲ್ಲಿ ಪ್ರತಿಷ್ಠಾಪಿಸಲಾಯಿತು. ಸಂಪ್ರದಾಯದಂತೆ ವಿಧಿ ವಿಧಾನ ಮಹಾ ಮಂಗಳಾರತಿ ನಂತರ ರಥೋತ್ಸವಕ್ಕೆ ಚಾಲನೆ ನೀಡಲಾಯಿತು.

ಭಕ್ತರು ಹಣ್ಣು ದವನ ಎಸೆಯುವ ಮೂಲಕ ದೇವರಿಗೆ ಭಕ್ತಿ ಸಮರ್ಪಿಸಿದರು. ರಥೋತ್ಸವದಲ್ಲಿ ಶಾಸಕ ಸಿ.ಎನ್.ಬಾಲಕೃಷ್ಣ ಹಾಗೂ ವಿಧಾನಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ ಪಾಲ್ಗೊಂಡು ಶ್ರೀನುಗ್ಗೇಳ್ಳಮ್ಮ ಶ್ರೀ ಕೆಂಪಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಜಾತ್ರಾ ಮಹೋತ್ಸವಕ್ಕೆ ಶುಭ ಕೋರಿದರು.

ಜಾತ್ರಾ ಮಹೋತ್ಸವದ ಅಂಗವಾಗಿ ದೇವಾಲಯ ಸೇರಿದಂತೆ ಪ್ರಮುಖ ರಸ್ತೆಗಳು ವಿದ್ಯುತ್ ದೀಪಲಂಕಾರಗಳಿಂದ ಕಂಗೊಳಿಸುತ್ತಿತ್ತು ಹಾಗೂ ಬಾರಿ ಮುದ್ದು ಗುಂಡಿನ ಪ್ರದರ್ಶನ ಮತ್ತು ರಸ ಸಂಜೆ ಕಾರ್ಯಕ್ರಮ ನಡೆಯಿತು. ಪ್ರತಿ ವರ್ಷದಂತೆ ಈ ವರ್ಷವೂ ಶ್ರೀನುಗ್ಗೇಳ್ಳಮ್ಮ ಅನ್ನದಾನ ಯುವಕ ಬಳಗದ ವತಿಯಿಂದ ಸಾವಿರಾರು ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಯಿತು.

ಜಾತ್ರಾ ಮಹೋತ್ಸವದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷ ವಿಠಲ್ ಕುಮಾರ್, ಉದ್ಯಮಿ ಜಗದೀಶ್, ಪ್ರಮುಖರಾದ ತೋಟಿ ನಾಗರಾಜ್, ಫೈನಾನ್ಸ್ ಪ್ರಕಾಶ್, ಸಬ್ಸಿಡಿ ದೇವರಾಜ್, ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ಜಯರಾಮ್, ಎಚ್.ಜೆ.ಕಿರಣ್, ಯುವ ಮುಖಂಡ ಸನ್ ರವಿ, ಎನ್.ಡಿ. ದೇವರಾಜ್, ಎನ್.ಆರ್. ಮುರಳಿ, ಆಟೋ ರಮೇಶ್, ಬಾರಿನ್ ಸದಾಶಿವ, ಎನ್.ಆರ್.ಚಂದ್ರು, ಎನ್.ವಿ. ಲೋಕೇಶ್, ಪಟೇಲ್ ಕುಮಾರ್, ಕೆಡಿಪಿ ಸದಸ್ಯ ಸಮಿವುಲ್ಲಾ, ಮಸೀದಿ ಮಾಜಿ ಅಧ್ಯಕ್ಷ ಮಹಮ್ಮದ್ ಜಾವಿದ್, ಬಾರಿನ್ ನಂಜುಂಡೇಗೌಡ, ಮಾಳೇರ್ ನಿತಿನ್, ಕಿರಣ್ ಗವಿರಂಗಯ್ಯ, ರಂಗಸ್ವಾಮಿ (ಆಯ), ಸೇರಿದಂತೆ ದೇವರು ಒಕ್ಕಲಿನ ಎಲ್ಲಾ ಗ್ರಾಮಗಳ ಪ್ರಮುಖರು, ನುಗ್ಗೇಹಳ್ಳಿ ಗ್ರಾಮಸ್ಥರು ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದರು.

Share This Article
blank

ಈ 4 ವಿಷಯಗಳ ಬಗ್ಗೆ ಮಾತನಾಡಬೇಡಿ! ಯಶಸ್ವಿ ಜೀವನ ನಿಮ್ಮದೆ…. successful life

successful life: ಪ್ರತಿಯೊಬ್ಬರ ಜೀವನವೂ ಅನಿರೀಕ್ಷಿತ ತಿರುವುಗಳಿಂದ ತುಂಬಿರುತ್ತದೆ. ಯಶಸ್ಸು, ವೈಫಲ್ಯ, ಸಂತೋಷ, ದುಃಖ, ಅದೃಷ್ಟ,…

ನೀವು ಎಷ್ಟೇ ಸಂಪಾದಿಸಿದರೂ ಕೈಯಲ್ಲಿ ಹಣ ಉಳಿಯುತ್ತಿಲ್ಲವೇ? ಸಾಲದಲ್ಲಿ ಮುಳುಗುತ್ತಿದ್ದೀರಾ? ಇಲ್ಲಿವೆ ಸಲಹೆಗಳು..Money Tips

Money Tips: ನಾವು ದಿನ ನಿತ್ಯ ಕಷ್ಟ ಪಟ್ಟು ದುಡಿದು ಹಣ ಸಂಪಾದಿಸುತ್ತೇವೆ. ಆದರೆ ನಮ್ಮ…

blank