ಶ್ರೀವರಸಿದ್ಧಿ ವಿನಾಯಕನಿಗೆ ವಿಶೇಷ ಪೂಜೆ : 50ನೇ ವರ್ಷದ ಸಂಭ್ರಮ ಹಿನ್ನೆಲೆ

blank

ಚಾಮರಾಜನಗರ : ಕೊಳ್ಳೇಗಾಲ ಪಟ್ಟಣದ ಶ್ರೀವರಸಿದ್ಧಿ ವಿನಾಯಕಸ್ವಾಮಿ ದೇವಸ್ಥಾನದ 50ನೇ ವರ್ಷದ ಸಂಭ್ರಮದ ಅಂಗವಾಗಿ ಶುಕ್ರವಾರ ಗಣಪನಿಗೆ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು.


ಮೂರ್ತಿಗೆ ವಿಶೇಷವಾಗಿ ಗಂಧದ ಅಲಂಕಾರ ಮಾಡಲಾಗಿತ್ತು. ಮುಂಜಾನೆಯಿಂದ ಪುಣ್ಯಾಹ, ಅಭಿಷೇಕ, ಕಳಸ ಪೂಜೆ, ಕಳಸ ಪ್ರತಿಷ್ಠಾಪನೆ, ಗಣಪತಿ ಹೋಮ, ಮಹಾಮಂಗಳಾರತಿ ಪೂಜಾ ಕೈಂಕರ್ಯ ಸಲ್ಲಿಸಲಾಯಿತು. ಭಕ್ತರಿಗೆ ಪ್ರಸಾದ ವಿನಿಯೋಗ ಮಾಡಲಾಯಿತು.


ಹೋಮ-ಯಾಗದ ಸೇವಾರ್ಥದಾರರಾದ ಮಾಜಿ ಶಾಸಕ ಎ.ಆರ್. ಕೃಷ್ಣಮೂರ್ತಿ ಹಾಗೂ ಅವರ ಪತ್ನಿ ಮಂಜುಳಾ ಪೂರ್ಣಾವತಿ ನಡೆಸಿ, ಮಹಾಮಂಗಳಾರತಿ ಸ್ವೀಕರಿಸಿದರು. ದೇವಾಲಯದ ಪೂಜಾ ಕೈಕಂರ್ಯಗಳನ್ನು ಪ್ರಧಾನ ಅರ್ಚಕ ಟಿ.ವಿ.ಎಸ್.ರಾಘವನ್, ಶ್ರೀನಿ, ಸಾರಂಗಪಾಣಿ, ಪ್ರಸಾದ್, ನಂದಕುಮಾರ್, ರಮೇಶ್, ಗೌತಮ್ ನೆರವೇರಿಸಿ ಕೊಟ್ಟರು. ಮೇಲ್ವಿಚಾರಕರಾದ ಸಿದ್ದರಾಮಯ್ಯ, ಸುರೇಶ್, ವರಸಿದ್ಧಿ ವಿನಾಯಕ ಟ್ರಸ್ಟ್ ಅಧ್ಯಕ್ಷ ಕೃಷ್ಣಪ್ಪ, ಶಂಕರಪ್ಪ ಮತ್ತಿತರಿದ್ದರು.

Share This Article

ಐಸ್​​ಕ್ಯೂಬ್​​ನಿಂದ ಮುಖಕ್ಕೆ ಮಸಾಜ್ ಮಾಡಿದ್ರೆ ನಿಮ್ಮ ಸೌಂದರ್ಯ ಹೆಚ್ಚುತ್ತದೆ! ತಜ್ಞರು ಏನು ಹೇಳುತ್ತಾರೆ? Ice cube Remedy

Ice cube Remedy : ಮುಖ ಸುಂದರವಾಗಿ ಕಾಣಲು ಅನೇಕ ಜನರು ವಿವಿಧ ಸಲಹೆಗಳನ್ನು ಅನುಸರಿಸುತ್ತಾರೆ.…

ಈ ನಕ್ಷತ್ರದಲ್ಲಿ ಹುಟ್ಟಿದ ಗಂಡಸರು ತಮ್ಮ ಪತ್ನಿಯರನ್ನು ರಾಜಕುಮಾರಿಯಂತೆ ನೋಡಿಕೊಳ್ಳುತ್ತಾರೆ! Birth of Stars

Birth of Stars : ಹುಟ್ಟಿದ ತಕ್ಷಣ ಜನ್ಮ ದಿನಾಂಕ ಹಾಗೂ ಹುಟ್ಟಿದ ಗಳಿಗೆಯನ್ನು ಬರೆದಿಡಲಾಗುತ್ತದೆ.…

ಕಲ್ಲಂಗಡಿ ಹಣ್ಣು ತಿಂದು ಸಿಪ್ಪೆ ಬಿಸಾಡ್ತೀರಾ? ಹಣ್ಣಿನ ಸಿಪ್ಪೆ ತಿಂದ್ರೆ ಪುರುಷರಿಗೆ ಆ ಸಾಮರ್ಥ್ಯ ಹೆಚ್ಚಾಗುವುದು! watermelon

watermelon: ಬೇಸಿಗೆ ಎಂದ ತಕ್ಷಣ ನಮಗೆ ನೆನಪಿಗೆ ಬರುವುದು  ಕಲ್ಲಂಗಡಿ ಹಣ್ಣು. ನಾವು ಕಲ್ಲಂಗಡಿ ಹಣ್ಣುಗಳನ್ನು…