ಬ್ಯಾಕೋಡು: ಕ್ಷೇತ್ರದ ಗ್ರಾಮೀಣ ಭಾಗದಲ್ಲಿ ಜನರ ಗಮನಕ್ಕೆ ತಾರದೆ ಕಂದಾಯ ಭೂಮಿಯನ್ನು ಅರಣ್ಯ ಇಲಾಖೆಗೆ ವರ್ಗಾವಣೆ ಮಾಡುತ್ತಿದ್ದು ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ಸಮಸ್ಯೆ ಕೇಳಬೇಕಾದ ಶಾಸಕರು ಕೆರೆ ಹಬ್ಬದ ಸಂಭ್ರಮದಲ್ಲಿದ್ದಾರೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ವಾಗ್ದಾಳಿ ನಡೆಸಿದರು.
ಭಾನುವಾರ ಸಾಗರ ತಾಲೂಕಿನ ಹೊಸಕೊಪ್ಪದಲ್ಲಿ ಕಾಂಗ್ರೆಸ್ ಸ್ಥಳೀಯ ಘಟಕ ಆಯೋಜಿಸಿದ್ದ ಅಂಬಾರಗುಡ್ಡ ಪಾದಯಾತ್ರೆ ಪೂರ್ವಭಾವಿ ಸಭೆಯಲ್ಲಿ ಕರಪತ್ರ ಬಿಡುಗಡೆ ಮಾಡಿ ಮಾತಾಡಿ, ಜನಪ್ರತಿನಿಧಿಗಳು ಜನರ ಸಂಕಟಗಳಿಗೆ ದನಿ ಆಗಬೇಕು. ಅಂಬಾರಗುಡ್ಡ ವಿಚಾರದಲ್ಲಿ ಜನವಸತಿ ಪ್ರದೇಶಗಳನ್ನು ಸೇರಿಸಿ ಕಂದಾಯ ಭೂಮಿಯನ್ನು ಜೀವವೈವಿಧ್ಯವಲಯ ಭಾಗವಾಗಿ ಅರಣ್ಯ ಇಲಾಖೆಗೆ ಹಕ್ಕು ವರ್ಗಾವಣೆ ಮಾಡಲಾಗಿದೆ. ಸರ್ಕಾರದ ಮೇಲೆ ಒತ್ತಡ ತರಬೇಕಾದ ಶಾಸಕರು ಮೌನವಾಗಿದ್ದಾರೆ ಎಂದರು.
ರಾಜಕೀಯ ಜನರ ಹೋರಾಟದ ಭಾಗವಾಗಬೇಕೇ ಹೊರತು ವ್ಯಾವಹಾರಿಕವಾಗಬಾದರು. ಭೂಮಿ ಹೋರಾಟ ಸಂದರ್ಭದಲ್ಲಿ ಲೋಹಿಯಾ ನಮಗೆ ಇದನ್ನೇ ಭೋದನೆ ಮಾಡಿದ್ದರು. ಇಂದಿಗೂ ನಾನು ಅವರ ಮಾತನ್ನು ಅನುಸರಿಸುತ್ತಿದ್ದೇನೆ. ಅಂಬಾರಗುಡ್ಡ ವಿಚಾರದಲ್ಲಿ ಸರ್ಕಾರ ತೆಗೆದುಕೊಂಡ ತೀರ್ಮಾನದ ವಿರುದ್ಧ ಜನತಾ ಹೋರಾಟ ಸಂಘಟಿಸಿ ಉತ್ತರ ನೀಡಬೇಕಾಗಿದೆ. ಜನರು ಸ್ವಯಂಪ್ರೇರಣೆಯಿಂದ ಫೆ.16ರ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಬೇಕು ಎಂದರು.
ಗುಡ್ಡ ಉಳಿಸಿಕೊಂಡವರೇ ಅನಾಥ: ಅಂಬಾರಗುಡ್ಡದ ತಪ್ಪಲಿನಲ್ಲಿರುವ 3,750 ಎಕರೆ ಕಂದಾಯ ಭೂಮಿಯನ್ನು ಅರಣ್ಯ ಇಲಾಖೆಗೆ ವರ್ಗಾವಣೆ ಮಾಡುವ ಮುನ್ನ ನಿಯಮಾವಳಿ ಪಾಲನೆ ಮಾಡಿಲ್ಲ. ಈ ಮೂಲಕ ಸ್ಥಳೀಯ ನಿವಾಸಿಗಳನ್ನು ವಂಚಿಸಲಾಗಿದೆ ಎಂದು ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್ ಹೇಳಿದರು. ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ ಸರ್ಕಾರ ಜನ ವಿರೋಧಿ ನಿಲುವು ತಾಳಿದೆ. ಹದಿನೈದು ವರ್ಷಗಳ ಹಿಂದೆ ಅಂಬಾರಗುಡ್ಡ ಗಣಿಗಾರಿಕೆ ಆರಂಭ ಆದಾಗ ಸರ್ಕಾರ ಸುಮ್ಮನೆ ಇತ್ತು. ಆದರೆ ಜನ ಹೋರಾಟ ಮಾಡಿ ಗುಡ್ಡ ಉಳಿಸಿಕೊಂಡರು. ಈಗ ಅದೇ ಜನರನ್ನು ಸರ್ಕಾರ ಅನಾಥ ಮಾಡುತ್ತಿದೆ ಎಂದು ದೂರಿದರು.
ಸಂಕಷ್ಟದಲ್ಲಿ ಜನ, ಸಂಭ್ರಮದಲ್ಲಿ ಶಾಸಕ; ಸದ್ದಿಲ್ಲದೆ ಅರಣ್ಯ ಇಲಾಖೆಗೆ ಭೂಹಕ್ಕು ವರ್ಗ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ವಾಗ್ದಾಳಿ

You Might Also Like
ಈ ಮಸಾಲೆಗಳು ವಿಟಮಿನ್ ಬಿ 12 ವೇಗವಾಗಿ ಹೆಚ್ಚಾಗಲು ಸಹಕರಿಸುತ್ತವೆ; ನಿಮಗಾಗಿ ಹೆಲ್ತಿ ಮಾಹಿತಿ | Health Tips
ಜೀವಸತ್ವಗಳು ದೇಹದ ಕಾರ್ಯನಿರ್ವಹಣೆಗೆ ಮಾತ್ರ ಅಗತ್ಯವಲ್ಲ, ಅವು ಶಕ್ತಿಯನ್ನು ಸಹ ಒದಗಿಸುತ್ತವೆ. ಅವುಗಳ ಕೊರತೆಯು ನರಗಳು,…
ಪಿರಿಯಡ್ಸ್ ನೋವನ್ನು ಕಡಿಮೆ ಮಾಡುವುದು ಹೇಗೆ?; ಮಹಿಳೆಯರು ತಿಳಿದುಕೊಳ್ಳಲೆಬೇಕಾದ ಮಾಹಿತಿ | Health Tips
ಋತುಬಂಧವನ್ನು ಈ ರೀತಿ ಅರ್ಥಮಾಡಿಕೊಳ್ಳಬಹುದು. ಋತುಬಂಧ ಎಂಬ ಪದವು ಎರಡು ಗ್ರೀಕ್ ಪದಗಳಿಂದ ಬಂದಿದೆ. ಮೆನೊ…
ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic
garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ. ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…