ಸದೃಢ ದೇಹಕ್ಕೆ ಕ್ರೀಡೆ ಅತ್ಯವಶ್ಯಕ

blank

ಭಾಲ್ಕಿ: ವಿದ್ಯಾರ್ಥಿಗಳು ಪಠ್ಯದೊಂದಿಗೆ ಕ್ರೀಡೆಗಳಿಗೂ ಮಹತ್ವ ಕೊಡಬೇಕು. ನಮ್ಮ ಸದೃಢ ದೇಹಕ್ಕೆ ಕ್ರೀಡೆಗಳು ಅತ್ಯವಶ್ಯಕವಾಗಿವೆ ಎಂದು ತಾಲೂಕು ದೈಹಿಕ ಶಿಕ್ಷಣಾಧಿಕಾರಿ ರೋಹಿದಾಸ ರಾಠೋಡ್ ಹೇಳಿದರು.

ಕಲವಾಡಿ ಗ್ರಾಮದ ಮಹಾತ್ಮಗಾಂಧಿ ಪ್ರೌಢಶಾಲೆಯಲ್ಲಿ, ಸಮಾಜ ಕಲಾಣ ಇಲಾಖೆಯಿಂದ ಮಂಗಳವಾರ ಆಯೋಜಿಸಿದ್ದ ತಾಲೂಕು ಮಟ್ಟದ ನಿಲಯಾರ್ಥಿಗಳ ಕ್ರೀಡಾಕೂಟದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಮಾನಸಿಕವಾಗಿ ನೆಮ್ಮದಿಯಿಂದ ಇರಬೇಕಾದರೆ ದೈಹಿಕ ಆರೋಗ್ಯಮುಖ್ಯ, ವಿದ್ಯಾರ್ಥಿಗಳು ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವುದು ಉತ್ತಮ ಬೆಳವಣಿಗೆ ಎಂದು ಹೇಳಿದರು.

ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ದತ್ತಾತ್ರಿ ಕಾಟಕರ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡಾ ಮನೋಭಾವದಿಂದ ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು. ಸೋಲು-ಗೆಲುವು ಸಹಜ. ಆದರೆ ಭಾಗವಹಿಸುವಿಕೆ ಮುಖ್ಯಎಂದರು.

ಸಂಸ್ಥೆ ಅಧ್ಯಕ್ಷೆ ಮೋಜಾಬಾಯಿ ಕಲವಾಡಿಕರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ತಾಪಂ ಇಒ ಕಚೇರಿಯ ವಿನೋದ ರೆಡ್ಡಿ ಅಧ್ಯಕ್ಷತೆ ವಹಿಸಿದ್ದರು. ಸಮಾಜ ಕಲ್ಯಾಣ ಇಲಾಖೆಯ ಪ್ರಭಾರಿ ಸಹಾಯಕ ನಿರ್ದೇಶಕಿ ಮಮ್ತಾಜ್ ಬೇಗಂ ಪ್ರಾಸ್ತಾವಿಕ ಮಾತನಾಡಿದರು.

ಮುಖ್ಯಶಿಕ್ಷಕ ಕಿರಣಕುಮಾರ ಭಾಟಸಾಂಗವಿ, ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕು ಅಧ್ಯಕ್ಷ ಜಯರಾಜ ದಾಬಶೆಟ್ಟಿ, ರಾಜ್ಯ ಸರ್ಕಾರಿ ನೌಕರರ ಸಂಘದ ನೂತನ ನಿದೇರ್ಶಕ ದಿಲೀಪಕುಮಾರ ಬಿರಾದಾರ, ಸಿಆರ್‌ಪಿ ಸಂತೋಷ ಧಬಾಲೆ, ಸಮಾಜ ಕಲ್ಯಾಣ ಇಲಾಖೆಯ ಧನರಾಜ ಬಂಬುಳಗೆ, ನಿಲಯ ಪಾಲಕ ಧನರಾಜ ಮೇತ್ರೆ, ಆನಂದ ಖಂಡಗೊಂಡ, ಪ್ರವೀಣ ಸಿಂಧೆ, ಪ್ರದೀಪ ಜೋಳದಪಕೆ, ದೈಹಿಕ ಶಿಕ್ಷಕ ಹಣಮಂತ ಕಾರಾಮುಂಗೆ, ವಿಜಯಕುಮಾರ ಬಾಜೋಳಗಾ, ಶೋಭಾ ಮಾಸಿಮಾಡೆ, ಆರತಿ ಥಮಕೆ ಇತರರಿದ್ದರು.

ಅಂಬಿಕಾ ಮತ್ತು ಸಂಗಡಿಗರು ಪ್ರಾರ್ಥನೆ ಗೀತೆ ಹಾಡಿದರು. ಕಿರಣಕುಮಾರ ಸ್ವಾಗತಿಸಿದರು. ಹಣಮಂತ ಕಾರಾಮುಂಗೆ ನಿರೂಪಣೆ ಮಾಡಿದರು. ಧನರಾಜ ಮೇತ್ರೆ ವಂದಿಸಿದರು.

Share This Article

ಈ ಅಭ್ಯಾಸಗಳಿಂದ ನೀವು ಶ್ವಾಸಕೋಶ ಕ್ಯಾನ್ಸರ್​ಗೆ​ ತುತ್ತಾಗಬಹುದು ಎಚ್ಚರ! ತಡೆಗಟ್ಟದ್ದಿದ್ರೆ ಸಾವು ಕಟ್ಟಿಟ್ಟಬುತ್ತಿ | Lung Cancer

Lung Cancer: ಇತ್ತೀಚಿನ ದಿನಗಳಲ್ಲಿ ಕ್ಯಾನ್ಸರ್ ಕಾಯಿಲೆಗೆ ತುತ್ತಾದವರ ಸಂಖ್ಯೆ ಗಣನೀಯವಾಗಿ ಏರಿಕೆ ಆಗುತ್ತಿದೆ. ವಯಸ್ಸಿನ…

ಪೂರ್ವಾಭಿಮುಖವಾಗಿ ಕುಳಿತು ಪೂಜೆ ಮಾಡುವುದೇಕೆ?; ಇಲ್ಲಿದೆ ಈ ಮಾತಿನ ಹಿಂದಿನ ಅಸಲಿ ಕಾರಣ | Health Tips

ಪೂಜೆ ಮಾಡುವಾಗ ಹೇಗೆ ನಿಯಮಗಳು ಮತ್ತು ನಿಬಂಧನೆಗಳನ್ನು ಮನಸ್ಸಿನಲ್ಲಿಟ್ಟುಕೊಳ್ಳಲಾಗುತ್ತದೆಯೋ ಅದೇ ರೀತಿಯಲ್ಲಿ ದಿಕ್ಕನ್ನು ಸಹ ಮನಸ್ಸಿನಲ್ಲಿಟ್ಟುಕೊಳ್ಳುವುದು…

ಊಟದ ಬಳಿಕ ಹೊಟ್ಟೆಯು ಬಲೂನ್‌ನಂತೆ ಊದಿಕೊಳ್ಳುತ್ತದೆಯೇ?; ಸಮಸ್ಯೆಗೆ ಇಲ್ಲಿದೆ ಪರಿಹಾರ | Health Tips

ಇತ್ತೀಚೆಗೆ ಜೀವನಶೈಲಿ ಮತ್ತು ಊಟದಿಂದಾಗಿ ಗ್ಯಾಸ್​​ ಸಮಸ್ಯೆಯು ತುಂಬಾ ಸಾಮಾನ್ಯವಾಗಿದೆ. ಇದು ಅನೇಕ ಕಾರಣಗಳಿಂದ ಉಂಟಾಗಬಹುದು.…