ಸಮುದಾಯಕ್ಕೆ ಹರಡುವ ಹಂತದಲ್ಲಿ ಕರೊನಾ

blank

ತೀರ್ಥಹಳ್ಳಿ: ಕರೊನಾ ವೈರಸ್ ಸೋಂಕು ಸಮುದಾಯ ಮಟ್ಟದಲ್ಲಿ ವ್ಯಾಪಿಸುವ ಹಂತಕ್ಕೆ ತಲುಪಿದ್ದು ಮುಂದಿನ ದಿನಗಳಲ್ಲಿ ಈ ಬಗ್ಗೆ ಹೆಚ್ಚು ಜಾಗ್ತೆ ವಹಿಸುವ ಅಗತ್ಯವಿದೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.

ಪಟ್ಟಣದಲ್ಲಿ ಶನಿವಾರ ತಾಲೂಕಿನ ಕರೊನಾ ಸೇನಾನಿಗಳ ಗೌರವಾರ್ಥ ಆಯೋಜಿಸಿದ್ದ ಸಮಾರಂಭದಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸೀರೆ ಮತ್ತು ಥರ್ವ ಪ್ಲಾಸ್ಕ್ ವಿತರಿಸಿ ಮಾತನಾಡಿದರು.

ಮುಂದಿನ ದಿನಗಳಲ್ಲಿ ಈ ಸೋಂಕು ಅತ್ಯಂತ ಅಪಾಯದ ಹಂತ ತಲುಪುವ ಸೂಚನೆಗಳು ಗೋಚರವಾಗುತ್ತಿದೆ. ಜನರು ವೈಯಕ್ತಿಕವಾಗಿ ಈ ಸೋಂಕಿನ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ. ಕರೊನಾ ವಿಪತ್ತನ್ನು ನಿಯಂತ್ರಿಸುವಲ್ಲಿ ಈ ಕಾರ್ಯಕರ್ತೆಯರು ಮಾಡುತ್ತಿರುವ ಬದ್ಧತೆಯ ಕಾರ್ಯ ಶ್ಲಾಘನೀಯವಾಗಿದೆ ಎಂದರು.

ಇದಕ್ಕೆ ಮುನ್ನ ತಾಲೂಕಿನ ಅಂಬುತೀರ್ಥದಲ್ಲಿರುವ ಶರಾವತಿ ನದಿ ಮೂಲಕ್ಕೆ ಹಿರಿಯ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಬಿ.ವೈ.ರಾಘವೇಂದ್ರ, ಈ ಕ್ಷೇತ್ರದಲ್ಲಿ ನಡೆದಿರುವ ಅಭಿವೃದ್ಧಿ ಕಾಮಗಾರಿಗಳ ಮಾಹಿತಿ ಪಡೆದರು.

ನಾಡಿಗೆ ಬೆಳಕನ್ನು ನೀಡುವ ನದಿಯ ಮೂಲ ಸ್ಥಾನವಾದ ಮತ್ತು ಪುರಾಣ ಪ್ರಸಿದ್ಧವಾದ ಈ ಕ್ಷೇತ್ರವನ್ನು ಪ್ರವಾಸಿ ಕೇಂದ್ರವಾಗಿ ಪರಿವರ್ತಿಸುವಲ್ಲಿ ಪ್ರವಾಸೋದ್ಯಮ, ನೀರಾವರಿ ಮುಂತಾದ ಇಲಾಖೆಗಳ ಆರ್ಥಿಕ ಸಹಕಾರದೊಂದಿಗೆ ಅಭಿವೃದ್ಧಿ ಪಡಿಸಲು ಸೂಕ್ತ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ನಂತರ ಪಟ್ಟಣದ ಸಮೀಪದ ತುಡ್ಕಿ ಬಡಾವಣೆಯಲ್ಲಿ ನಿರ್ವಣಗೊಳ್ಳುತ್ತಿರುವ 13 ಕೋಟಿ ವೆಚ್ಚದ ಒಕ್ಕಲಿಗರ ಸಮುದಾಯ ಭವನದ ಕಾಮಗಾರಿಯನ್ನು ವೀಕ್ಷಿಸಿದರು. ಜತೆಗೆ ಕುರುವಳ್ಳಿಯಲ್ಲಿ ಬಿಲ್ಲವ ಸಮಾಜದ ಸಮುದಾಯ ಭವನದ ಶಂಕುಸ್ಥಾಪನೆಯನ್ನು ನೆರವೇರಿಸಿದರು.

ಶಾಸಕ ಆರಗ ಜ್ಞಾನೇಂದ್ರ, ನೀರಾವರಿ ಇಲಾಖೆಯ ಅಧಿಕಾರಿ ರಮೇಶ್, ಸಹ್ಯಾದ್ರಿ ಪಾರಂಪರಿಕ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ, ಪುರಾತತ್ವ ಇಲಾಖೆಯ ಶೇಜೇಶ್ವರ್, ಲಕ್ಷ್ಮೀನಾರಾಯಣ ಕಾಶಿ, ಜಿಪಂ ಸದಸ್ಯೆ ಅಪೂರ್ವಾ ಶರಧಿ, ತಹಸೀಲ್ದಾರ್ ಡಾ. ಶ್ರೀಪಾದ್, ಎಸ್. ದತ್ತಾತ್ರಿ, ಎಸ್.ಎಸ್.ಜ್ಯೋತಿಪ್ರಕಾಶ್ ಇತರರಿದ್ದರು.

Share This Article

ಈ ಮಸಾಲೆಗಳು ವಿಟಮಿನ್ ಬಿ 12 ವೇಗವಾಗಿ ಹೆಚ್ಚಾಗಲು ಸಹಕರಿಸುತ್ತವೆ; ನಿಮಗಾಗಿ ಹೆಲ್ತಿ ಮಾಹಿತಿ | Health Tips

ಜೀವಸತ್ವಗಳು ದೇಹದ ಕಾರ್ಯನಿರ್ವಹಣೆಗೆ ಮಾತ್ರ ಅಗತ್ಯವಲ್ಲ, ಅವು ಶಕ್ತಿಯನ್ನು ಸಹ ಒದಗಿಸುತ್ತವೆ. ಅವುಗಳ ಕೊರತೆಯು ನರಗಳು,…

ಪಿರಿಯಡ್ಸ್​ ನೋವನ್ನು ಕಡಿಮೆ ಮಾಡುವುದು ಹೇಗೆ?; ಮಹಿಳೆಯರು ತಿಳಿದುಕೊಳ್ಳಲೆಬೇಕಾದ ಮಾಹಿತಿ | Health Tips

ಋತುಬಂಧವನ್ನು ಈ ರೀತಿ ಅರ್ಥಮಾಡಿಕೊಳ್ಳಬಹುದು. ಋತುಬಂಧ ಎಂಬ ಪದವು ಎರಡು ಗ್ರೀಕ್ ಪದಗಳಿಂದ ಬಂದಿದೆ. ಮೆನೊ…

ಬೇಸಿಗೆಯಲ್ಲಿ ಬೆಳ್ಳುಳ್ಳಿಯನ್ನು ಹೆಚ್ಚು ತಿನ್ನುತ್ತೀರಾ? ಈ ಮಾಹಿತಿ ನಿಮಗಾಗಿ..garlic

garlic: ಬೆಳ್ಳುಳ್ಳಿ ನಮ್ಮ ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು ನೀಡುತ್ತದೆ.  ಆದರೆ ಬೇಸಿಗೆಯಲ್ಲಿ ಹೆಚ್ಚು ಬೆಳ್ಳುಳ್ಳಿ ತಿಂದರೆ…