ಸಾರ್ವಜನಿಕರೊಂದಿಗೆ ಒಡನಾಟ ಉತ್ತಮವಾಗಿರಲಿ

blank

ಚಿತ್ರದುರ್ಗ: ತಾಲೂಕಿನ ಕಾಲ್ಗೆರೆ, ಇಸ್ಸಾಮುದ್ರ ಗ್ರಾಪಂಗಳಿಗೆ ಗುರುವಾರ ಜಿಪಂ ಸಿಇಒ ಎಸ್.ಜೆ. ಸೋಮಶೇಖರ್ ಹಠಾತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕಾಲ್ಗೆರೆ ಗ್ರಾಪಂ ಕಚೇರಿಯಲ್ಲಿ ಮಹಾತ್ಮಾ ಗಾಂಧಿ ನರೇಗಾ ಯೋಜನೆ ಕಡತ ಪರಿಶೀಲಿಸಿದರು. ನಂತರ ಅಜಾದ್ ನಗರದಲ್ಲಿ ಬೂದು ನಿರ್ವಹಣೆ ಕಾಮಗಾರಿ ವೀಕ್ಷಿಸಿದರು. ನರೇಗಾದಡಿ ನಿಯಮಾನುಸಾರ ಕಾಮಗಾರಿ ಅನುಷ್ಠಾನಗೊಳಿಸಬೇಕು. ಗುಣಮಟ್ಟವನ್ನೂ ಕಾಪಾಡಿಕೊಳ್ಳಬೇಕು ಎಂದು ಸೂಚಿಸಿದರು.
ಇಸ್ಸಾಮುದ್ರ ಗ್ರಾಪಂಗೆ ಭೇಟಿ ನೀಡಿ ಕಂದಾಯ ವಸೂಲಿ ಮಾಹಿತಿ ಪಡೆದರು. ಸಿಬ್ಬಂದಿಯ ಹಾಜರಾತಿ ಪರಿಶೀಲಿಸಿದರು. ಅಧಿಕಾರಿಗಳು ಮತ್ತು ಸಿಬ್ಬಂದಿ ಸರಿಯಾದ ಸಮಯಕ್ಕೆ ಕೆಲಸಕ್ಕೆ ಹಾಜರಾಗಬೇಕು. ಸಾರ್ವಜನಿಕರೊಂದಿಗೆ ಉತ್ತಮ ಒಡನಾಟವಿಟ್ಟುಕೊಳ್ಳಬೇಕು. ಯಾವುದೇ ಸಮಸ್ಯೆಗಳು ಬಾರದಂತೆ ಕರ್ತವ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ನರೇಗಾ ಯೋಜನೆ ಕಡತ ಪರಿಶೀಲಿಸಿ, ಮಾರ್ಗಸೂಚಿ ಮತ್ತು ಚೆಕ್‌ಲಿಸ್ಟ್ ಪ್ರಕಾರ ಕಾರ್ಯನಿರ್ವಹಿಸಲು ಸೂಚಿಸಿದರು. ನಂತರ ಅದೇ ಗ್ರಾಮದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಮಕ್ಕಳ ಹಾಜರಾತಿ, ಆರೈಕೆ, ಆರೋಗ್ಯ, ಗುಣಮಟ್ಟದ ಆಹಾರದ ಬಗ್ಗೆ ಪರಿಶೀಲಿಸಿದರು. ಮಕ್ಕಳ ಹಾಜರಾತಿ ಸರಿಯಾಗಿ ನಿರ್ವಹಿಸುವಂತೆ ಅಂಗನವಾಡಿ ಕಾರ್ಯಕರ್ತೆಗೆ ಸೂಚಿಸಿದರು.
ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ, ಮಕ್ಕಳ ಹಾಜರಾತಿ, ಅವರ ವಿದ್ಯಾಭ್ಯಾಸ, ಫಲಿತಾಂಶಗಳ ಬಗ್ಗೆ ಮಾಹಿತಿ ಪಡೆದರು. ಶಿಕ್ಷಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಅಡುಗೆ ಕೋಣೆ, ಆಹಾರದ ಗುಣಮಟ್ಟ ಪರಿಶೀಲಿಸಿ, ಮಕ್ಕಳೊಂದಿಗೆ ಬಿಸಿಯೂಟ ಸವಿದರು.
ಜಿಪಂ ಉಪ ಕಾರ್ಯದರ್ಶಿ ಕೆ. ತಿಮ್ಮಪ್ಪ, ತಾಪಂ ಇಒ ವೈ. ರವಿಕುಮಾರ್, ಜಿಪಂ ನರೇಗಾ ಯೋಜನೆ ಎಡಿಪಿಸಿ ಮೋಹನ್‌ಕುಮಾರ್, ಬಿಆರ್‌ಸಿ ಸಂಪತ್‌ಕುಮಾರ್, ಕಾಲ್ಗೆರೆ ಗ್ರಾಪಂ ಅಭಿವೃದ್ಧಿ ಅಧಿಕಾರಿ ದಿಲೀಪ್‌ಕುಮಾರ್, ಗ್ರಾಪಂ ಸದಸ್ಯರು ಇದ್ದರು.

blank
Share This Article

ಬೆಳಿಗ್ಗೆ ಎದ್ದ ತಕ್ಷಣ ಹೀಗೆ ಮಾಡಿ..ನಿಮ್ಮ ದೇಹದ ಕೊಬ್ಬು ತಕ್ಷಣ ಕಡಿಮೆಯಾಗುತ್ತದೆ! weight loss

weight loss: ಇತ್ತೀಚಿನ ದಿನಗಳಲ್ಲಿ, ಹೊಟ್ಟೆಯ ಸುತ್ತ ಇರುವ ಮೊಂಡುತನದ ಕೊಬ್ಬನ್ನು ಕಡಿಮೆ ಮಾಡುವುದು (ತೂಕ…

ಎಸಿ, ಫ್ಯಾನ್​ ಇದ್ದರೂ ಬೆವರುತ್ತಿದ್ದೀರಾ?; ತಂಪಿನ ಪ್ರದೇಶದಲ್ಲಿಯೂ ಇಷ್ಟೊಂದು ಹಿಟ್​ ಇರಲು ಕಾರಣವೇನು?: ಇಲ್ಲಿದೆ ಮಾಹಿತಿ | Sweating

Sweating: ಸಾಮಾನ್ಯವಾಗಿ ಬಹುತೇಕರು ಶಕೆಯಲ್ಲಿ ಬೆವರುವುದನ್ನು ಕಾಣುತ್ತೇವೆ. ಆದರೆ, ಇನ್ನು ಕೆಲ ಜನರು ತಾಪಮಾನ 35ಕ್ಕೂ…

ಕಾರಿನೊಳಗೆ ಮಕ್ಕಳನ್ನು ಆಡಲು ಬಿಡುತ್ತೀರಾ; ಇದು ಅವರ ಕೊನೆಯ ಆಟವಾಗಬಹುದು; ಪೋಷಕರು ಇದನ್ನು ತಿಳಿದಿರಲೇಬೇಕು| Car

Car| ಇತ್ತೀಚಿನ ದಿನಗಳಲ್ಲಿ ಪೋಷಕರ ಅಜಾಗರೂಕತೆಯಿಂದಾಗಿ ಕಾರಿನೊಳಗೆ ಆಟವಾಡುವಾಗ ಮಕ್ಕಳು ಮೃತಪಡುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಪೋಷಕರು…