ಸಿಡಿಲಿಗೆ ಹಸು ಬಲಿ, ಹಾರಿಹೋದ ಮನೆಯ ಚಾವಣಿ : ನೆಲ ಕಚ್ಚಿದ ಎರಡು ಎಕರೆಯಲ್ಲಿ ಬೆಳೆದಿದ್ದ ಜೋಳ

blank
  • ಚಾಮರಾಜನಗರ : ಹನೂರು ಭಾಗದಲ್ಲಿ ಗುರುವಾರ ತಡರಾತ್ರಿ ಗುಡುಗು ಸಹಿತ ಧಾರಾಕಾರ ಮಳೆ ಸುರಿಯಿತು. ಹನೂರು ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಸಿಡಿಲಿಗೆ ಹಸು ಬಲಿಯಾಗಿದ್ದರೆ, ಕುರಟ್ಟಿ ಹೊಸೂರು ಗ್ರಾಮದಲ್ಲಿ ಮನೆಯ ಚಾವಣಿ ಹಾರಿಹೋಗಿದ್ದು, ಗೋಡೆಗೆ ಹಾನಿಯಾಗಿದೆ.

  • ಮಲ್ಲಯ್ಯನಪುರ ಗ್ರಾಮದಲ್ಲಿ ಮಾದೇಶ್ ಎಂಬವರು ಜಮೀನಿನ ಕೊಟ್ಟಿಗೆಯಲ್ಲಿ ಹಸುವನ್ನು ಕಟ್ಟಿ ಹಾಕಿದ್ದರು. ರಾತ್ರಿ 11 ಗಂಟೆಯಲ್ಲಿ ಗುಡುಗು ಸಹಿತ ಮಳೆಯಾಯಿತು. ಈ ವೇಳೆ ಸಿಡಿಲು ಬಡಿದು ಹಸು ಮೃತಪಟ್ಟಿದೆ. ಪರಿಹಾರಕ್ಕಾಗಿ ಮಾದೇಶ್ ಒತ್ತಾಯಿಸಿದ್ದಾರೆ.
  • ಕುರಟ್ಟಿಹೊಸೂರು ಗ್ರಾಮದಲ್ಲಿ ಗಾಳಿ ಸಹಿತ ಜೋರು ಮಳೆಯಾಯಿತು. ಪರಿಣಾಮ ಸುಬ್ರಮಣ್ಯಶೆಟ್ಟಿ ಎಂಬುವರ ಮನೆಯ ಚಾವಣಿ ಸಂಪೂರ್ಣ ಹಾರಿಹೋಗಿದ್ದು, ಗೋಡೆ ಬಿರುಕು ಬಿಟ್ಟಿದೆ. ಸದ್ಯ ಮನೆಯಲ್ಲಿದ್ದವರಿಗೆ ಯಾವುದೇ ಅನಾಹುತವಾಗಿಲ್ಲ. ಆದರೆ ಕೆಲ ಗೃಹೋಪಯೋಗಿ ವಸ್ತುಗಳು ಹಾನಿಯಾಗಿದೆ. ಇದೇ ಗ್ರಾಮದ ಪೊನ್ನುಶೆಟ್ಟಿ ಎಂಬುವರ ಜಮೀನಿನಲ್ಲಿ 2 ಎಕರೆಯಲ್ಲಿನ ಜೋಳದ ಸಲು ನೆಲಕಚ್ಚಿದೆ. ಆದ್ದರಿಂದ ಸಂಬಂಧಪಟ್ಟ ಅಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಸರ್ಕಾರದಿಂದ ಸೂಕ್ತ ಪರಿಹಾರ ದೊರಕಿಸಿ ಕೊಡುವಂತೆ ಸಂತ್ರಸ್ತರು ಒತ್ತಾಯಿಸಿದ್ದಾರೆ.

Share This Article

ಹೋಟೆಲ್​ ಸ್ಟೈಲ್​​ ಪನೀರ್ ಅಮೃತಸರಿ ಮಾಡುವ ವಿಧಾನ ಇಲ್ಲಿದೆ; ನೀವೊಮ್ಮೆ ಟ್ರೈ ಮಾಡಿ | Recipe

ಹಲವು ಬಾರಿ ಒಂದೇ ರೀತಿಯ ಆಹಾರ ತಿಂದು ಬೇಸರವಾಗುತ್ತದೆ. ಆಗ ಹೋಟೆಲ್‌ಗೆ ಹೋಗಿ ಊಟ ಮಾಡಲು…

ಚಿನ್ನದ ಮೇಲೆ ಲೋನ್​ ತಗೋತ್ತಿದ್ದೀರಾ? ಹಾಗಿದ್ರೆ ಈ ತಪ್ಪುಗಳಿಂದ ಮೊದಲು ದೂರವಿರಿ, ಇಲ್ಲದಿದ್ರೆ ನಷ್ಟ ಖಚಿತ | Gold Loan

Gold Loan: ಮನೆಯಲ್ಲಿದ್ದರೆ ಚಿನ್ನ ಚಿಂತೆಯೂ ಏತಕೇ ಇನ್ನಾ? ಎಂಬ ಮಾತನ್ನು ಇಂದಿಗೂ ನಮ್ಮ ಜನ…

ತಣ್ಣೀರಿನಲ್ಲಿ ಈಜುವುದರಿಂದಾಗುವ ಪ್ರಯೋಜನಗಳನ್ನು ನೀವು ತಿಳಿದುಕೊಳ್ಳಲೇಬೇಕು; ನಿಮಗಾಗಿಯೇ ಈ ಮಾಹಿತಿ | Health Tips

ತಣ್ಣೀರಿನಲ್ಲಿ ಈಜುವುದು ಕೇವಲ ಸಾಹಸ ಕ್ರೀಡೆ ಅಥವಾ ಹವ್ಯಾಸವಲ್ಲ. ಆದರೆ ಇದು ಆರೋಗ್ಯಕ್ಕೆ ಹಲವು ಪ್ರಯೋಜನಗಳನ್ನು…