ಸೇತುವೆ ಕಟ್ಟೆಮೇಲೆ ಹತ್ತಿದ ಕಾರು!

blank

ಶನಿವಾರಸಂತೆ: ಗುಡುಗಳಲೆ ಬಳಿ ಕಾರು ಬೈಕ್‌ಗೆ ಡಿಕ್ಕಿಯಾದ ಬಳಿಕ ಚಾಲಕನ ನಿಯಂತ್ರಣ ತಪ್ಪಿದ ಕಾರು ಸೇತುವೆಯ ಕಟ್ಟೆಮೇಲೆ ಹತ್ತಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

blank

ಹಂಡ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಾಳೂರು ಗ್ರಾಮದ ನವೀನ್ ಎಂಬುವರು ಇನೋವಾ ಕಾರಿನಲ್ಲಿ ಶುಕ್ರವಾರ ರಾತ್ರಿ 7 ಗಂಟೆ ಸುಮಾರಿಗೆ ಶನಿವಾರಸಂತೆಯ ಕೆಆರ್‌ಸಿ ವೃತ್ತದಿಂದ ಗುಡುಗಳಲೆ ಕಡೆಗೆ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಹೋಗುತ್ತಿದ್ದರು. ಈ ವೇಳೆ ಆಸ್ಪತ್ರೆ ಬಳಿ ಕಾರು ಶನಿವಾರಸಂತೆ ಕಡೆಗೆ ಬರುತ್ತಿದ್ದ ಬೈಕ್‌ಗೆ ಡಿಕ್ಕಿಯಾಗಿದೆ. ಬಳಿಕ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು ಗುಡುಗಳಲೆ ಬಳಿಯಲ್ಲಿರುವ ಸೇತುವೆ ಕಟ್ಟೆಮೇಲೆ ಹತ್ತಿದೆ.

blank

ನದಿಯೊಳಗೆ ಕಾರು ಬೀಳುವುದು ಸ್ವಲ್ಪದರಲ್ಲಿ ತಪ್ಪಿದ್ದು, ಕಾರಿನ ಮುಂಭಾಗ ಚಕ್ರಗಳು ನದಿಗೆ ಚಾಚಿಕೊಂಡಂತೆ ಸೇತುವೆ ಕಂಬಿ ಮೇಲೆ ಸಿಕ್ಕಿಕೊಂಡಿದೆ. ಘಟನೆ ನಂತರ ಕಾರು ಚಾಲಕ ನವೀನ್ ಹಾಗೂ ಆತನ ಜತೆಗಿದ್ದ ಮತ್ತೊಬ್ಬ ಕಾರನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾರೆ. ಅಪಘಾತದಲ್ಲಿ ಬೈಕ್ ಸವಾರರಾದ ಹಾಸನ ಜಿಲ್ಲೆಯ ಕೌಕೋಡಿ ಗ್ರಾಮದ ವಿನೋದ್ ಮತ್ತು ಸತೀಶ್ ಎಂಬುವರಿಗೆ ಸಣ್ಣಪುಟ್ಟ ಗಾಯವಾಗಿದೆ. ಶನಿವಾರಸಂತೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

ರಾತ್ರಿ ಮಲಗುವ ಮುನ್ನ ಪಾತ್ರೆಗಳನ್ನು ತೊಳೆದಿಡಬೇಕು ಯಾಕೆ ಗೊತ್ತಾ?; ಇದಕ್ಕೆ ವೈಜ್ಞಾನಿಕ ಕಾರಣವೂ ಇದೆ | Reason Behind

ಹಿಂದೂ ಧರ್ಮಗ್ರಂಥಗಳಲ್ಲಿ ನಮ್ಮ ಸೌಕರ್ಯ, ಅದೃಷ್ಟ ಮತ್ತು ಆರೋಗ್ಯದ ಬಗ್ಗೆ ಅನೇಕ ನಿಯಮಗಳನ್ನು ಉಲ್ಲೇಖಿಸಲಾಗಿದೆ. ಅದನ್ನು…

ಶೀತ-ಕೆಮ್ಮಿನಿಂದ ಬಳಲುತ್ತಿದ್ದೀರಾ?; ಈ ಮನೆಮದ್ದು ಬಳಸಿ ಸಮಸ್ಯೆಗೆ ಗುಡ್​ಬೈ ಹೇಳಿ | Health Tips

ಚಳಿಗಾಲದಲ್ಲಿ ದುರ್ಬಲ ರೋಗನಿರೋಧಕ ಶಕ್ತಿಯಿಂದಾಗಿ ಶೀತ, ಕೆಮ್ಮು, ಗಂಟಲು ನೋವು, ಎದೆನೋವು, ನೆಗಡಿ, ತಲೆನೋವು ಮುಂತಾದ…

ಪಿರಿಯಡ್ಸ್​​ ಸಮಯದಲ್ಲಿ ನಿದ್ರಾಹೀನತೆ ಅನುಭವಿಸುವುದು ಏಕೆ?; ಇಲ್ಲಿದೆ ತಿಳಿದುಕೊಳ್ಳಲೇಬೇಕಾದ ಮಾಹಿತಿ | Health Tips

ಪ್ರೀ ಮೆನ್ಸ್ಟ್ರುವಲ್ ಸಿಂಡ್ರೋಮ್ (PMS) ಇದು ಸಾಮಾನ್ಯವಾಗಿ ಮಹಿಳೆಯ ಋತುಚಕ್ರದ ಮೊದಲು ಕಾಣಿಸಿಕೊಳ್ಳುತ್ತದೆ. ಮೂಡ್ ಸ್ವಿಂಗ್ಸ್,…