ಹೊಂಡದಲ್ಲಿ ಮುಳುಗಿ ಯುವಕರ ಸಾವು

blank

ಚಿಟಗುಪ್ಪ: ಹೊಂಡದಲ್ಲಿ ನೀರು ಕುಡಿಯಲು ಹೋಗಿದ್ದ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಪಟ್ಟಣದ ಹೊರವಲಯದ ಫಾತ್ಮಾಪುರದಲ್ಲಿ ಶನಿವಾರ ಜರುಗಿದೆ. ಗ್ರಾಮದ ಮೊಹ್ಮದ್ ಖಾಜಾ ಅಲ್ಲೂರೆ (೨೦), ಸೈಯದ್ ಹುಸೇನ್ ಅಲ್ಲೂರೆ (೨೦) ಮೃತರು. ಮೊಹ್ಮದ್ ಖಾಜಾ ಜತೆ ಸಂಬAಧಿಯಾದ ಸೈಯದ್ ಹುಸೇನ್ ದನ ಮೇಯಿಸಲು ಹೋಗಿದ್ದಾನೆ. ತಗ್ಗಿನ್ನಲ್ಲಿದ್ದ ನೀರು ಕುಡಿಯಲು ಸೈಯದ್ ನೀರಿಗೆ ಇಳಿದಿದ್ದು, ಹೊಂಡದಲ್ಲಿ ಬಿದ್ದಿದ್ದಾನೆ. ಅವನನ್ನು ಉಳಿಸಲು ಮೊಹ್ಮದ್ ಖಾಜಾ ಮುಂದಾಗಿದ್ದಾಗ ಇಬ್ಬರೂ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮೃತ ದೇಹಗಳನ್ನು ಅಗ್ನಿಶಾಮಕ ದಳದವರು ನೀರಿನಿಂದ ತೆಗೆದರು. ಘಟನಾ ಸ್ಥಳಕ್ಕೆ ತಹಸೀಲ್ದಾರ್ ರವೀಂದ್ರ ದಾಮಾ, ಪಿಎಸ್‌ಐ ಬಾಷುಮಿಯ್ಯಾ ಇತರ ಅಧಿಕಾರಿಗಳು ಭೇಟಿ ನೀಡಿದರು. ಚಿಟಗುಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

ಮನೆಯಲ್ಲೇ ಗಟ್ಟಿ ಮೊಸರು ಮಾಡುವ ವಿಧಾನ ನಿಮಗೆ ತಿಳಿದಿದೆಯೇ; ಇಲ್ಲಿದೆ ಸಿಂಪಲ್ ಟ್ರಿ​ಕ್ಸ್​​​​​ | Health Tips

ಚಳಿಗಾಲವಿರಲಿ, ಬೇಸಿಗೆಯಿರಲಿ ಮೊಸರನ್ನು ಇಷ್ಟಪಡುವವರು ಹವಾಮಾನ ಬದಲಾದಾಗಲೂ ಅದನ್ನು ತಿನ್ನುವುದನ್ನು ನಿಲ್ಲಿಸುವುದಿಲ್ಲ. ಚಳಿ ಹೆಚ್ಚಾದಾಗಲೂ ಅನೇಕರು…

ಊಟದ ಸಮಯದಲ್ಲಿ ಈ ತಪ್ಪುಗಳನ್ನು ಮಾಡಲೇಬೇಡಿ; ಮಾಹಿತಿ ತಿಳಿದು ರಕ್ತದಲ್ಲಿ ಸಕ್ಕರೆ ಮಟ್ಟ ಹೆಚ್ಚಾಗುವುದನ್ನು ತಪ್ಪಿಸಿ | Health Tips

ಮಧುಮೇಹವು ಭಾರತದಲ್ಲಿ ಮಾತ್ರವಲ್ಲದೆ ಪ್ರಪಂಚದಾದ್ಯಂತ ವೇಗವಾಗಿ ಹರಡುತ್ತಿದೆ. WHO ಕೂಡ ಈ ಬಗ್ಗೆ ಕಳವಳ ವ್ಯಕ್ತಪಡಿಸಿದೆ.…

ಈ ಪದಾರ್ಥಗಳನ್ನು ಯಾವುದೇ ಕಾರಣಕ್ಕೂ ಕುಕ್ಕರ್‌ನಲ್ಲಿ ಬೇಯಿಸಬೇಡಿ, ವಿಷಕಾರಿಯಾಗಬಹುದು ಎಚ್ಚರ! Pressure Cooker

Pressure Cooker : ಪ್ರೆಶರ್​ ಕುಕ್ಕರ್ ಇಂದು ಪ್ರತಿ ಮನೆಗಳಲ್ಲೂ ಅಗತ್ಯವಿರುವ ಅಡುಗೆ ಸಲಕರಣೆಗಳಲ್ಲಿ ಒಂದಾಗಿದೆ.…