ಚಿತ್ರದುರ್ಗ: ನಗರದ ತರಾಸು ರಂಗಮಂದಿರದಲ್ಲಿ ಲೋಹಿಸ್ ಬೈಲ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್, ಜಿಲ್ಲೆಯ ಎಲ್ಲಾ ಅಂಗವಿಕಲರ ಸಂಘ-ಸಂಸ್ಥೆ ಒಕ್ಕೂಟಗಳು, ವಿಆರ್ಡಬ್ಲ್ಯು, ಯುಆರ್ಡಬ್ಲ್ಯು, ಎಂಆರ್ಡಬ್ಲ್ಯು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಅಂಗವಿಕಲರಿಗಾಗಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಚಾಲನೆ ನೀಡಿದರು. ಪ್ರಭಾರ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಎಂ.ವಿ.ವೀಣಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್, ಸಾಮಾಜಿಕ ಕಾರ್ಯಕರ್ತ ಸುರೇಶ್ಬಾಬು, ಮುಖಂಡರಾದ ರಂಗಪ್ಪ ದಾಸರ್, ಪಾಪಯ್ಯ, ಆನಂದ್, ಜಾಕೀರ್ ಹುಸೇನ್, ಮುಜೀಬ್ ಇತರರಿದ್ದರು.