More

    ಅಂಚೆ ಮತ ಡಿಸಿ, ಸಿಇಒ ಚಲಾವಣೆ

    ಚಿತ್ರದುರ್ಗ: ಲೋಕಸಭಾ ಚುನಾವಣೆ ಅಂಗವಾಗಿ ನಗರದ ತಹಸೀಲ್ದಾರರ ಕಚೇರಿಯಲ್ಲಿ ಸ್ಥಾಪಿಸಿರುವ ಅಂಚೆ ಮತಪತ್ರ ಸೌಲಭ್ಯ ಕೇಂದ್ರದಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಭಾನುವಾರ ಮತ ಚಲಾಯಿಸಿದರು.

    ಕೇಂದ್ರ ಸ್ಥಾಪನೆ: ನಮೂನೆ 12 ಅರ್ಜಿ ಸಲ್ಲಿಸಿದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ ಮತ ಚಲಾಯಿಸಲು ಅನುಕೂಲವಾಗುವಂತೆ ಅಂಚೆ ಮತಪತ್ರ ಸೌಲಭ್ಯ ಕೇಂದ್ರವನ್ನು ಚಿತ್ರದುರ್ಗ ಹಾಗೂ ಹೊಳಲ್ಕೆರೆ ತಾಲೂಕು ಕಚೇರಿಯಲ್ಲಿನ ಸಹಾಯಕ ಚುನಾವಣಾಧಿಕಾರಿ ಕಾರ್ಯಾಲಯದಲ್ಲಿ ಜಿಲ್ಲಾ ಚುನಾವಣಾಧಿಕಾರಿ ನಿರ್ದೇಶನದಂತೆ ಸ್ಥಾಪಿಸಲಾಗಿದೆ. ಅರ್ಹರು ಏ. 22ವರೆಗೆ ಬೆಳಗ್ಗೆ 9 ರಿಂದ ಸಂಜೆ 5ರೊಳಗೆ ಮತ ಚಲಾಯಿಸಬಹುದು ಎಂದು ಟಿ.ವೆಂಕಟೇಶ್‌ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts