More

    ಅಕ್ರಮ ಕಲ್ಲುಕ್ವಾರಿಗಳ ಮೇಲೆ ದಾಳಿ

    ಶಿವಮೊಗ್ಗ: ತಾಲೂಕಿನ ಎರಡು ಗ್ರಾಮದಲ್ಲಿದ್ದ ಅಕ್ರಮ ಕಲ್ಲುಕ್ವಾರಿಗಳ ಮೇಲೆ ಶಿವಮೊಗ್ಗ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಭಾನುವಾರ ಬೆಳಗ್ಗೆ ದಾಳಿ ನಡೆಸಿ ಸಿಡಿಮದ್ದು ಹಾಗೂ ವಾಹನಗಳನ್ನು ಜಪ್ತಿ ಮಾಡಿದ್ದಾರೆ.

    ಡಿಸಿ ಕೆ.ಬಿ.ಶಿವಕುಮಾರ್ ಇತ್ತೀಚೆಗೆ ನೀಡಿದ ಸೂಚನೆ ಮೇರೆಗೆ ಇಲಾಖೆ ಅಧಿಕಾರಿ ರಶ್ಮಿ ನೇತೃತ್ವದಲ್ಲಿ ಗೆಜ್ಜೇನಹಳ್ಳಿ ಹಾಗೂ ದೇವಕಾತಿಕೊಪ್ಪದಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಕ್ವಾರಿಗಳ ಮೇಲೆ ದಾಳಿ ನಡೆಸಿದ್ದಾರೆ.

    ದೇವಕಾತಿಕೊಪ್ಪದಲ್ಲಿ ದಾಳಿ ನಡೆಸಿ ಒಂದು ಬಾಕ್ಸ್ ಸಿಡಿ ಮದ್ದುಗಳನ್ನು ಮತ್ತು ಒಂದು ಹಿಟಾಚಿ, ಒಂದು ಕಂಪ್ರೆಸರ್​ನ್ನ ವಶಪಡಿಸಿಕೊಂಡಿದ್ದಾರೆ. ಜನವರಿ ಕೊನೇ ವಾರದಲ್ಲಿ ಇದೇ ಮಾದರಿಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಮತ್ತು ಅರಣ್ಯ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ 10 ವಾಹನಗಳನ್ನು ವಶಪಡಿಸಿಕೊಂಡಿದ್ದರು.

    ವಶಪಡಿಸಿಕೊಳ್ಳಲಾದ ಸಿಡಿಮದ್ದುಗಳ ಮೇಲೆ ಯಾದಗಿರಿ ಜಿಲ್ಲೆಯ ವಿಳಾಸವಿದ್ದು, ಈ ಸಿಡಿಮದ್ದು ತಯಾರಿಕ ಘಟಕದ ಮೇಲೂ ಪ್ರಕರಣ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಕಳೆದ ಗುರುವಾರವಷ್ಟೇ ಡಿಸಿ ಕಚೇರಿಯಲ್ಲಿ ಸಭೆ ನಡೆಸಿದ್ದ ಡಿಸಿ ಕೆ.ಬಿ.ಶಿವಕುಮಾರ್, ಜಿಲ್ಲೆಯಲ್ಲಿರುವ ಅನಧಿಕೃತ ಮರಳು ಕ್ವಾರಿ ಸ್ಥಗಿತಗೊಳಿಸಿ, ಪರವಾನಗಿ ಹೊಂದಿದ್ದು ಸ್ಥಗಿತಗೊಂಡಿರುವ ಕ್ವಾರಿಗಳನ್ನು ಕೂಡಲೇ ಆರಂಭಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts