More

    ಅಕ್ರಮ ಕಸಾಯಿಖಾನೆ ಬಂದ್ ಮಾಡಿಸಲು ಮನವಿ

    ರಟ್ಟಿಹಳ್ಳಿ: ತಾಲೂಕಿನಲ್ಲಿ ಅಕ್ರಮ ಗೋ ಹತ್ಯೆ, ಗೋ ಸಾಗಣೆಗೆ ಕಡಿವಾಣ ಹಾಕುವಂತೆ ತಾಲೂಕು ವಿಶ್ವ ಹಿಂದು ಪರಿಷತ್, ಬಜರಂಗ ದಳದಿಂದ ಪಪಂ ಸಿಬ್ಬಂದಿ ರಾಜಕುಮಾರ ಹೇಂದ್ರೆ, ಪಿಎಸ್​ಐ ಎ.ಆರ್. ಮಣಕೂರ, ತಹಸೀಲ್ದಾರ್ ಕೆ. ಗುರಬಸವರಾಜ ಅವರಿಗೆ ಗುರುವಾರ ಮನವಿ ಸಲ್ಲಿಸಲಾಯಿತು.

    ವಿಶ್ವ ಹಿಂದು ಪರಿಷತ್ ಸದಸ್ಯ ಆಕಾಶಗೌಡ ಪಾಟೀಲ ಮಾತನಾಡಿ, ತಾಲೂಕಿನಲ್ಲಿ ಅಕ್ರಮವಾಗಿ ಗೋ ಹತ್ಯೆ, ಗೋ ಸಾಗಾಣಿಕೆ ಯಥೇಚ್ಛವಾಗಿ ನಡೆಯುತ್ತಿದೆ. ಉಚ್ಚ ನ್ಯಾಯಾಲಯದ ಆದೇಶದಂತೆ ತಾಲೂಕಿನಲ್ಲಿರುವ ಅಕ್ರಮ ಕಸಾಯಿಖಾನೆಗಳನ್ನು ಬಂದ್ ಮಾಡಬೇಕಾಗಿದೆ. ಆದರೆ, ಇಲ್ಲಿ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಕಳೆದ 15 ದಿನಗಳಿಂದ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿರುವವರನ್ನು ತಡೆದು ಪೊಲೀಸರ ಗಮನಕ್ಕೆ ತರಲಾಗಿದೆ. ಕೆಲವು ವಾರಸುದಾರರಿಗೆ ಒಪ್ಪಿಸಿ ಇನ್ನು ಕೆಲವು ಗೋ ಶಾಲೆಗೆ ಒಪ್ಪಿಸಲಾಗಿದೆ. ಪಟ್ಟಣದಲ್ಲಿ ದನಗಳನ್ನು ಅಕ್ರಮವಾಗಿ ಹತ್ಯೆ ಮಾಡುತ್ತಿದ್ದು, ಪಟ್ಟಣ ಪಂಚಾಯಿತಿಯವರು ಕ್ರಮ ತೆಗೆದುಕೊಂಡಿಲ್ಲ. ಪೊಲೀಸರಿಗೆ ಹಲವು ಬಾರಿ ತಿಳಿಸಿದರೂ ಪ್ರಯೋಜನವಾಗಿಲ್ಲ. ಈ ಅಕ್ರಮಕ್ಕೆ ಕಡಿವಾಣ ಹಾಕದಿದ್ದಲ್ಲಿ ರಟ್ಟಿಹಳ್ಳಿಯಲ್ಲಿ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದರು.

    ವಿಶ್ವ ಹಿಂದು ಪರಿಷತ್ ಸದಸ್ಯರಾದ ಶರತ್ ಮೂಲಿಮನಿ, ಲೋಹಿತ್ ಮುದಿಯಪ್ಪನವರ, ಶಿವರಾಜ ದ್ಯಾವಕ್ಕಳವರ, ನವೀನ ಸುಣಗಾರ, ಶಿವು ಮುರಡೆಪ್ಪನವರ, ರಾಜು ಕುಪೇಲುರ, ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts