ಸವಣೂರ: ಪಟ್ಟಣದ ಇಬ್ಬರಲ್ಲಿ ಕರೊನಾ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೈ ಮಂಗಳವಾರ ಭೇಟಿ ನೀಡಿ ಪರಿಶೀಲಿಸಿದರು.
ಎಸ್ಎಂ ಕೃಷ್ಣ ನಗರದಲ್ಲಿರುವವರಿಗೆ ನಿತ್ಯ ಆಹಾರದ ಕಿಟ್, ಉಚಿತವಾಗಿ ಹಾಲು, ಔಷಧ, ಶುದ್ಧ ಕುಡಿಯುವ ನೀರು ಒದಗಿಸಲು ಸ್ಥಳೀಯ ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲದೆ, ಪ್ರದೇಶದಲ್ಲಿ ನಿತ್ಯ 2 ಬಾರಿ ಔಷಧ ಸಿಂಪಡಿಸುವಂತೆ ಪುರಸಭೆ ಮುಖ್ಯಾಧಿಕಾರಿಗೆ ಸೂಚಿಸಿದರು. ಆಶಾ ಹಾಗೂ ಆರೋಗ್ಯ ಕಾರ್ಯಕರ್ತೆಯರಿಗೆ ಫಿವರ್ ಕ್ಲಿನಿಕ್ನಲ್ಲಿ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಲಾಗಿದೆ.
ನಂತರ ಸವಣೂರು ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಕರೊನಾ ಚಿಕಿತ್ಸೆಗೆ 34 ಬೆಡ್ ಸಿದ್ಧಪಡಿಸಬೇಕು. ಆರೋಗ್ಯ ಕೇಂದ್ರದಲ್ಲಿ ತಾತ್ಕಾಲಿಕ ಒಪಿಡಿ ಆರಂಭಿಸಬೇಕು. ಪಟ್ಟಣದಲ್ಲಿರುವ ಎಚ್ಎಲ್ವಿ ಶಾಲೆಯಲ್ಲಿ ತಾತ್ಕಾಲಿಕವಾಗಿ ಒಪಿಡಿ ಆರಂಭಿಸಲು ಆರೋಗ್ಯ ಅಧಿಕಾರಿಗಳಿಗೆ ಸೂಚಿಸಿದರು.
ವಾಕರ ಸಾರಿಗೆ ಸಂಸ್ಥೆಯಿಂದ ಸಂಚಾರಿ ಫಿವರ್ ಕ್ಲಿನಿಕ್ ಸಿದ್ಧಗೊಂಡಿದ್ದು, ಅದನ್ನು ಸವಣೂರಿನ ಕಂಟೈನ್ಮೆಂಟ್ ಪ್ರದೇಶದಲ್ಲಿ ಕಾರ್ಯನಿರ್ವಹಿಸಲು ಬಿಡಬೇಕು. ಸವಣೂರ ಪಟ್ಟಣವನ್ನು ಬಫ್ರ್ ಜೋನ್ ಎಂದು ಗುರುತಿಸಲಾಗಿದೆ ಎಂದರು.
ಎಸಿ ಅನ್ನಪೂರ್ಣ ಮುದಕಮ್ಮನವರ ಮಾತನಾಡಿ, ಚೆಕ್ಪೋಸ್ಟ್, ಸೀಲ್ಡೌನ್, ಬಫರ್ಜೋನ್, ಕಂಟೈನ್ಮೆಂಟ್ ಜೋನ್ಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಸಿಬ್ಬಂದಿಯನ್ನು ನೇಮಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆ ವಸತಿ ನಿಲಯದಲ್ಲಿ ಕಂಟ್ರೋಲ್ ರೂಂ ತೆರೆಯಲಾಗಿದೆ. ಸಾರ್ವಜನಿಕರು ತುರ್ತು ಸೇವೆಗಾಗಿ 08378-24188 ಹಾಗೂ 08378-241777ಸಂಖ್ಯೆಗೆ ಕರೆ ಮಾಡಬಹುದು ಎಂದರು.