More

    ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ವಿಧಿಸಿ -ಜೈ ಭೀಮ್ ಪ್ರಬುದ್ಧ ಸೇನಾ ಪ್ರತಿಭಟನೆ

    ದಾವಣಗೆರೆ: ಮಣಿಪುರ ಹಾಗೂ ವಿಟ್ಲದಲ್ಲಿ ನಡೆದ ಅತ್ಯಾಚಾರ ಪ್ರಕರಣದ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ಜೈ ಭೀಮ್ ಪ್ರಬುದ್ಧ ಸೇನಾ ಸಮಿತಿ ಪದಾಧಿಕಾರಿಗಳು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
    ನಗರದ ಅಂಬೇಡ್ಕರ್ ವೃತ್ತದಿಂದ ಘೋಷಣಾ ಫಲಕ ಹಿಡಿದು ಮೆರವಣಿಗೆ ಹೊರಟ ಪ್ರತಿಭಟನಾಕಾರರು ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಅಧಿಕಾರಿಗಳ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.
    ಜನಾಂಗೀಯ ಸಂಘರ್ಷ, ಅತ್ಯಾಚಾರ ಹಾಗೂ ಹಿಂಸಾಚಾರ ಪ್ರಕರಣಗಳಿಂದ ನಲುಗಿರುವ ಮಣಿಪುರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಅಲ್ಲಿನ ಸರ್ಕಾರ ವಿಫಲವಾಗಿದೆ. ಕೂಡಲೇ ಸರ್ಕಾರ ವಜಾಗೊಳಿಸಿ ರಾಷ್ಟ್ರಪತಿ ಆಡಳಿತ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
    ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ದಲಿತ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ದಲಿತರಿಗೆ ರಕ್ಷಣೆ ಇಲ್ಲದಂತಾಗಿದೆ. ಎಲ್ಲ ಅತ್ಯಾಚಾರಿಗಳನ್ನು ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು.
    ಧರ್ಮಸ್ಥಳದಲ್ಲಿ 11 ವರ್ಷಗಳ ಹಿಂದೆ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ನಡೆದಿದ್ದರೂ ಈವರೆಗೂ ಆರೋಪಿಗಳನ್ನು ಪತ್ತೆ ಹಚ್ಚಲಾಗಿಲ್ಲ. ಆರೋಪಿಗಳ ಪತ್ತೆಗೆ ಉನ್ನತ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
    ಸಮಿತಿಯ ಸಂಸ್ಥಾಪಕ ಅಧ್ಯಕ್ಷ ಎಂ.ಚಂದ್ರಪ್ಪ, ಯಶವಂತಕುಮಾರ್, ಮಂಜಪ್ಪ, ಸುನಿಲ್, ಶಿವಕುಮಾರ್, ಅಂಜಿನಪ್ಪ, ಮಂಜುನಾಥ್ ಇತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts