More

    ಅದ್ಧೂರಿ ಕನ್ನಡಾಂಬೆಯ ಭಾವಚಿತ್ರ ಮೆರವಣಿಗೆ

    ಬಾಗಲಕೋಟೆ: ಜಿಲ್ಲಾಡಳಿತದ ವತಿಯಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ಮಂಗಳವಾರ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಸ್ತಬ್ಧ ಚಿತ್ರ ಮೆರವಣಿಗೆ ಆಕರ್ಷಿಸಿತು. ಈ ಪ್ರದರ್ಶನದಲ್ಲಿ ಬಾಗಲಕೋಟೆಯ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಾಗಲಕೋಟೆಯ ಘಟಕ ನಿರ್ಮಾಣ ಮಾಡಿದ್ದ ಬೆಲೂರ ಹಳೆಬೀಡು ಹೊಯ್ಸಳ ಸಾಮ್ರಾಜ್ಯದ ಆಳ್ವಿಕೆಯನ್ನು ಬಿಂಬಿಸುವ ಸ್ಥಬ್ದಚಿತ್ರ ಪ್ರಥಮ ಸ್ಥಾನ ಪಡೆದುಕೊಂಡಿತು.


    ನಂತರ ಬಾಲ್ಯವಿವಾಹ ನಿಷೇಧ ಕುರಿತು ಜಾಗೃತಿ ಮೂಡಿಸುವ ಮಾಹಿತಿಯನ್ನೊಳಗೊಂಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸ್ಥಬ್ಧ ಚಿತ್ರ ದ್ವಿತೀಯ ಸ್ಥಾನ ಪಡೆದುಕೊಂಡಿತು. ಅದರಂತೆ ಕೃಷಿಯಲ್ಲಿ ಅರಣ್ಯೀಕರಣ ಕುರಿತ ಅರಣ್ಯ ಇಲಾಖೆಯ ಸ್ಥಬ್ದ ಚಿತ್ರವು ತೃತೀಯ ಸ್ಥಾನ ಪಡೆದುಕೊಂಡಿತು.


    ಆರಂಭದಲ್ಲಿ ಜಿಲ್ಲಾಡಳಿತ ಭವನದ ಎದುರಿಗೆ ಇರುವ ಅಶೋಕ ಸ್ತಬ್ಧ ಕನ್ನಡಾಂಬೆಯ ಭಾವಚಿತ್ರದ ಅದ್ಧೂರಿ ಮೆರವಣಿಗೆಗೆ ಜಿಲ್ಲಾಧಿಕಾರಿ ಪಿ.ಸುನೀಲ್‌ಕುಮಾರ ಚಾಲನೆ ನೀಡಿದರು. ಮೆರವಣಿಗೆ ಮೆರವಣಿಗೆಯಲ್ಲಿ ವಿವಿಧ ಜಾಲಪದ ಕಲಾತಂಡಗಳು, ವಿವಿಧ ಇಲಾಖೆಯವರು ತಯಾರಿಸಿದ ಸ್ತಬ್ದ ಚಿತ್ರಗಳು ಎಲ್ಲರನ್ನು ಆಕರ್ಷಿಸಿದವು. ಮೆರವಣಿಗೆಯೂ ನವನಗರ ಬಸ್ ನಿಲ್ದಾಣ, ಎಲ್.ಐ.ಸಿ ವೃತ್ತದ ಮುಖಾಂತರ ಜಿಲ್ಲಾ ಕ್ರೀಡಾಂಗಕ್ಕೆ ಅಂತ್ಯಗೊಂಡಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts