More

    ಅಧ್ಯಕ್ಷರಾಗಿ ಹಗರೆ ಕಾಂತರಾಜು ಅವಿರೋಧ ಆಯ್ಕೆ ; ಬೇಲೂರು ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಚುನಾವಣೆ


    ಹಾಸನ : ಬೇಲೂರು ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಅಧ್ಯಕ್ಷರಾಗಿ ಜೆಡಿಎಸ್ ಬೆಂಬಲಿತ ಹಗರೆ ಕಾಂತರಾಜು ಮಂಗಳವಾರ ಅವಿರೋಧ ಆಯ್ಕೆಯಾದರು.


    ಮಲ್ಲೇಗೌಡ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಮಂಗಳವಾರ ಚುನಾವಣೆ ನಿಗದಿಯಾಗಿತ್ತು. ಜೆಡಿಎಸ್ ಬೆಂಬಲಿತರಾದ ಎಂ.ಕೆ.ಆರ್.ಸೋಮೇಶ್ ಹಾಗೂ ಹಗರೆ ಕಾಂತರಾಜು ನಾಮಪತ್ರ ಸಲ್ಲಿಸಿದ್ದರು. ನಂತರ ಮುಖಂಡರ ಸಮ್ಮುಖದಲ್ಲಿ ಮಾತುಕತೆ ನಡೆಸಿದ ಬಳಿಕ ಎಂ.ಕೆ.ಆರ್.ಸೋಮೇಶ್ ತಮ್ಮ ನಾಮಪತ್ರ ವಾಪಸ್ ಪಡೆದರು. ಹಾಗಾಗಿ ಚುನಾವಣಾಧಿಕಾರಿ ಹಾಗೂ ಸಹಕಾರ ಸಂಘಗಳ ಉಪನಿಬಂಧಕಿ ಶಕ್ಕು ಅವರು ಕಾಂತರಾಜು ಅವರ ಅವಿರೋಧ ಆಯ್ಕೆ ಘೋಷಿಸಿದರು.


    ಜೆಡಿಎಸ್ ತಾಲೂಕು ಅಧ್ಯಕ್ಷ ತೋ.ಚ.ಅನಂತ ಸುಬ್ಬರಾಯ ಮಾತನಾಡಿ, ಸಂಘವು ಉತ್ತಮವಾಗಿ ನಡೆಯುತ್ತಿದೆ. ಅತ್ಯುತ್ತಮ ಕಟ್ಟಡ ಹೊಂದಿದೆ. ರೈತರಿಗೆ ಸಕಾಲಕ್ಕೆ ಅಗತ್ಯ ರಸಗೊಬ್ಬರ ಒದಗಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎಲ್ಲ ಸಹಕಾರದೊಂದಿಗೆ ಸಂಘದ ಬೆಳವಣಿಗೆಗೆ ಮುಂದಾಗಲಿ ಎಂದರು.


    ನೂತನ ಅಧ್ಯಕ್ಷ ಕಾಂತರಾಜು ಮಾತನಾಡಿ, ಸಂಘದ ನಿರ್ದೇಶಕರು, ಷೇರುದಾರರ ಸಹಕಾರದಿಂದ ಸಂಘದ ಬೆಳವಣಿಗೆಗೆ ಕೆಲಸ ಮಾಡಲಾಗುವುದು. ರೈತರ ಅನುಕೂಲಕ್ಕಾಗಿ ಅಗತ್ಯವಿರುವ ಸೌಲಭ್ಯ ಒದಗಿಸಲು ಮುಂದಾಗಲಿದ್ದೇವೆ ಎಂದು ಹೇಳಿದರು.


    ತಾಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂದ ಉಪಾಧ್ಯಕ್ಷ ರಾಜಶೇಖರಯ್ಯ, ನಿರ್ದೇಶಕರಾದ ಮಲ್ಲೇಗೌಡ, ಎಂ.ಕೆ.ಆರ್.ಸೋಮೇಶ್, ರವಿಕುಮಾರ್, ಎಸ್.ನಾಗೇಶ್, ಲಕ್ಷ್ಮಣ್, ಕುಮಾರ್ ಕಣಗುಪ್ಪೆ, ವಿಜಯ್‌ಕುಮಾರ್, ಜೆಡಿಎಸ್ ಮುಖಂಡರಾದ ಎಂ.ಕೆ.ಆರ್.ನಾಗೇಶ್, ದಿಲೀಪ್, ಎಪಿಎಂಸಿ ಮಾಜಿ ಅಧ್ಯಕ್ಷ ಸಿ.ಎಚ್.ಮಹೇಶ್, ತಾಪಂ ಮಾಜಿ ಅಧ್ಯಕ್ಷ ರಂಗೇಗೌಡ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts