ಯಲ್ಲಾಪುರ: ತಾಲೂಕಿನ ಕಣ್ಣಿಗೇರಿ ಗ್ರಾ.ಪಂ. ವ್ಯಾಪ್ತಿಯ ಕೊಡಸೆಯಲ್ಲಿ ಅನಧಿಕೃತವಾಗಿ ದಾಸ್ತಾನು ಮಾಡಲಾಗಿದ್ದ ಸಿಲಿಂಡರ್ಗಳನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.
ಕೊಡಸೆಯಲ್ಲಿ ಮೌಲಾಲಿ ಫಕೀರಸಾಬ್ ಎಂಬುವರ ಅತಿಕ್ರಮಣ ಜಾಗದಲ್ಲಿರುವ ಮನೆಯ ಪಕ್ಕ ಅನಧಿಕೃತವಾಗಿ, ಅಸುರಕ್ಷಿತವಾಗಿ 30 ಸಿಲಿಂಡರ್ಗಳನ್ನು ದಾಸ್ತಾನು ಮಾಡಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳು ಸಿಲಿಂಡರ್ಗಳನ್ನು ವಶಕ್ಕೆ ಪಡೆದಿದ್ದಾರೆ. ತಹಸೀಲ್ದಾರ್ ಶ್ರೀಕೃಷ್ಣ ಕಾಮ್ಕರ್, ಗ್ರೇಡ್-2 ತಹಸೀಲ್ದಾರ್ ಸಿ.ಜಿ. ನಾಯ್ಕ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿತ್ತು.