More

    ಅನಧಿಕೃತ ಮೈಕ್ ತೆರವುಗೊಳಿಸಿ

    ಚಿಕ್ಕಮಗಳೂರು: ಜಿಲ್ಲೆಯ ಪ್ರಾರ್ಥನಾ ಮಂದಿರಗಳ ಮೇಲಿರುವ ಅನಧಿಕೃತ ಮೈಕ್ ತೆರವುಗೊಳಿಸುವಂತೆ ಆಗ್ರಹಿಸಿ ಶ್ರೀರಾಮ ಸೇನೆ ಕಾರ್ಯಕರ್ತರು ಮಂಗಳವಾರ ಎಸ್ಪಿ ಉಮಾ ಪ್ರಶಾಂತ್ ಅವರಿಗೆ ಮನವಿ ಸಲ್ಲಿಸಿದರು. ಸುಪ್ರೀಂ ಕೋರ್ಟ್ ಹಾಗೂ ರಾಜ್ಯ ಸರ್ಕಾರದ ಆದೇಶವಿದ್ದರೂ ಜಿಲ್ಲೆಯ ಪ್ರಾರ್ಥನಾ ಮಂದಿರಗಳ ಮೇಲೆ ಮೈಕ್ ಕಟ್ಟಿ ಶಬ್ದಮಾಲಿನ್ಯದ ಜತೆ ನಾಗರಿಕರಿಗೆ ಕಿರಿಕಿರಿ ಉಂಟುಮಾಡಲಾಗುತ್ತಿದೆ. ಅಂಥವರ ವಿರುದ್ಧ ಕ್ರಮ ಜರುಗಿಸದಿರುವುದು ಖಂಡನೀಯ. ಇದು ಕೋರ್ಟ್ ಆದೇಶದ ಉಲ್ಲಂಘನೆಯಾಗಿದೆ ಎಂದು ಜಿಲ್ಲಾಧ್ಯಕ್ಷ ರಂಜಿತ್ ಶೆಟ್ಟಿ ಹೇಳಿದರು.

    ಪ್ರಾರ್ಥನಾ ಮಂದಿರದ ಸುತ್ತಮುತ್ತ ಇರುವ ವಿದ್ಯಾರ್ಥಿಗಳು, ರೋಗಿಗಳು, ಕಾರ್ವಿುಕರ ನೆಮ್ಮದಿ ಹಾಳಾಗುತ್ತಿದೆ. ಶಾಲೆ, ಆಸ್ಪತ್ರೆ, ಕಚೇರಿಗಳ ನಿರ್ವಹಣೆಗೂ ಅಡ್ಡಿಯಾಗಿದೆ. ಸರ್ಕಾರ, ಸುಪ್ರೀಂ ಕೋರ್ಟ್, ಪರಿಸರ ಕೋರ್ಟ್ ಆದೇಶಗಳಿಗೆ ಕಿಮ್ಮತ್ತು ನೀಡದಿರುವುದು ದೇಶದ ಕಾನೂನು, ಸಂವಿಧಾನಕ್ಕೆ ಬಗೆಯುವ ದ್ರೋಹವಾಗಿದೆ. ಹಾಗಾಗಿ ಜಿಲ್ಲೆಯ ಪ್ರಾರ್ಥನಾ ಮಂದಿರಗಳ ಮೇಲಿರುವ ಮೈಕ್​ಗಳನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ನೆಮ್ಮದಿ ನೀಡುವ ಜತೆಗೆ ಕಾನೂನು, ಸಂವಿಧಾನ ರಕ್ಷಿಸಲು ಕ್ರಮ ಕೈಗೊಳ್ಳದಿದ್ದರೆ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts