More

    ಅಭಿಮಾನಿಗಳಿಂದ ದೇವಸ್ಥಾನಗಳಲ್ಲಿ ವಿಶೇಷ ಪೂಜೆ

    ಗದಗ: ಸಿ.ಸಿ. ಪಾಟೀಲ ಅಭಿಮಾನಿ ಬಳಗದ ವತಿಯಿಂದ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ. ಪಾಟೀಲ ಅವರ 62ನೇ ಜನ್ಮದಿನದ ನಿಮಿತ್ತ ಗುರುವಾರ ಅವಳಿನಗರದ 35 ವಾರ್ಡ್​ಗಳಲ್ಲಿನ 62 ದೇವಸ್ಥಾನಗಳಲ್ಲಿ ವಿಶೇಷ ಪೂಜೆ ಹಾಗೂ ಅಭಿಷೇಕ ಮಾಡಿಸಲಾಯಿತು.

    ಸಚಿವರ ಜನ್ಮ ದಿನದ ಪ್ರಯುಕ್ತ ಪಂಡಿತ ಪುಟ್ಟರಾಜ ಕವಿ ಗವಾಯಿಗಳ ಪುಣ್ಯಾಶ್ರಮದಲ್ಲಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿ, ಅಂಧ-ಅನಾಥ ಮಕ್ಕಳಿಗೆ ಸಿಹಿ ವಿತರಣೆ ಮಾಡಲಾಯಿತು. ಬಿಜೆಪಿ ಜಿಲ್ಲಾಧ್ಯಕ್ಷ ಮೋಹನ ಮಾಳಶೆಟ್ಟಿ, ಅನಿಲ ಮೆಣಸಿನಕಾಯಿ, ಲಿಂಗರಾಜ ಪಾಟೀಲ, ಎಂ.ಎಸ್. ಕರೀಗೌಡ್ರ, ಮಹಾಂತೇಶ ನಾಲ್ವಾಡ, ರವಿ ದಂಡಿನ, ಪ್ರಶಾಂತ ನಾಯ್ಕರ, ಅನಿಲ ಅಬ್ಬಿಗೇರಿ, ಶಿರಾಜ ಬಳ್ಳಾರಿ, ಶಿವಲಿಂಗ ಶಾಸ್ತ್ರಿ, ಬಸವಣ್ಣೆಯ್ಯ ಹಿರೇಮಠ, ರಾಘವೇಂದ್ರ ಯಳವತ್ತಿ, ಈರ್ಷಾದ ಮಾನ್ವಿ, ಕಿಷನ್ ಮೇರವಾಡೆ, ರೇಖಾ ಅಳವಂಡಿ, ಅಶ್ವಿನಿ ಜಗತಾಪ, ಶಾರದಾ ಹಿರೇಮಠ ಮತ್ತಿತರರು ಇದ್ದರು.

    ಆಟೋ ಚಾಲಕರಿಗೆ ಸಮವಸ್ತ್ರ ವಿತರಣೆ

    ನರಗುಂದ: ಹುಟ್ಟುಹಬ್ಬದ ಅಂಗವಾಗಿ ಸಚಿವ ಸಿ.ಸಿ. ಪಾಟೀಲ ಅವರು ಗುರುವಾರ ಬೆಳಗ್ಗೆ ಪಟ್ಟಣದ ದಂಡಾಪೂರ ಬಡಾವಣೆಯ ಶ್ರೀ ಉಡಚಾ ಪರಮೇಶ್ವರಿ ಹಾಗೂ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು. ಹುಟ್ಟುಹಬ್ಬದ ಅಂಗವಾಗಿ ಬಿಜೆಪಿ ಕಾರ್ಯಕರ್ತರು ಪಟ್ಟಣದ ಜೈಭೀಮ ಆಟೋ ಚಾಲಕರ, ಮಾಲೀಕರ ಸಂಘದ ಸದಸ್ಯರಿಗೆ ಸಮವಸ್ತ್ರ ವಿತರಿಸಿದರು. ಸಿದ್ರಾಮೇಶ್ವರ ಬಡಾವಣೆಯ ಕಾರ್ಯಕರ್ತರು ಶಾಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕ ಹಾಗೂ ಪೆನ್ನು ವಿತರಿಸಿ ಸರಳವಾಗಿ ಕಾರ್ಯಕ್ರಮವನ್ನು ಆಚರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts