More

    ಅಭಿವೃದ್ಧಿ ವೇಗ ಹೆಚ್ಚಿಸಲು ಬಿಜೆಪಿಯಿಂದ ಸಾಧ್ಯ

    ಸರಗೂರು: ರಾಜಕೀಯ ಸ್ಥಿರತೆ, ಅಭಿವೃದ್ಧಿ ವೇಗ ಹೆಚ್ಚಿಸಲು ಬಿಜೆಪಿಯಿಂದ ಮಾತ್ರ ಸಾಧ್ಯ. ರಾಜ್ಯದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದ್ದು, ಈ ಕ್ಷೇತ್ರದ ಮತದಾರರು ಮತವನ್ನು ಬಿಜೆಪಿಗೆ ನೀಡಿ ನನ್ನ ಗೆಲುವಿಗೆ ಸಹಕರಿಸಬೇಕು ಎಂದು ಬಿಜೆಪಿ ಅಭ್ಯರ್ಥಿ ಕೆ.ಎಂ. ಕೃಷ್ಣನಾಯಕ ಮನವಿ ಮಾಡಿದರು.
    ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಶುಕ್ರವಾರ ಮಾಲಾರ್ಪಣೆ ಮಾಡಿ, ನಂತರ ಮನುಗನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೂವಿನಕೊಳ, ಲಂಕೆ, ಮನುಗನಹಳ್ಳಿ, ಹುನುಗಹಳ್ಳಿ, ಅಡಹಳ್ಳಿ, ಮುದ್ದನಹಳ್ಳಿ ಗ್ರಾಮಗಳಿಗೆ ಭೇಟಿ ನೀಡಿ ರೋಡ್ ಶೋ ಮೂಲಕ ಮತಯಾಚನೆ ಮಾಡಿ ಮಾತನಾಡಿದರು.
    ಇದು ಬರೀ ಚುನಾವಣೆಯಲ್ಲ. ಕರ್ನಾಟಕದ ಭವಿಷ್ಯ, ಪ್ರಧಾನಿ ಮೋದಿ ಅವರ ಕೈ ಬಲಪಡಿಸುವ ಚುನಾವಣೆ. ಕಾಂಗ್ರೆಸ್ ಮತ್ತು ಜೆಡಿಎಸ್ ಅಧಿಕಾರಕ್ಕೆ ಬಂದರೆ ಭ್ರಷ್ಟಾಚಾರ, ಪರಿವಾರ ರಾಜಕಾರಣ, ಗಲಭೆ ಹೆಚ್ಚಾಗಲಿದೆ ಎಂದು ದೂರಿದರು.
    ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರು, ಬಡವರು, ಕೂಲಿಕಾರ್ಮಿಕರು, ಸಾರ್ವಜನಿಕರಿಗೆ ಅನುಕೂಲವಾಗುವ ಕ್ಯಾಂಟಿನ್ ಮಾಡಿ ಮಾಡಿದೆ. ಕರೊನಾ ಸಮಯದಲ್ಲಿ ತಾಲೂಕಿನ ಜನತೆ ಕಷ್ಟದಲ್ಲಿದ್ದಾಗ ನಾನು ಯಾವುದಕ್ಕೂ ಅಂಜದೆ ಎಚ್.ಡಿ.ಕೋಟೆ ಮತ್ತು ಸರಗೂರು ತಾಲೂಕಿನ ಜನತೆ 25 ರಿಂದ 30 ಸಾವಿರ ಆಹಾರ ಕಿಟ್ ವಿತರಣೆ ಮಾಡಿದೆ ಎಂದು ಹೇಳಿದರು.
    ಮುಂದಿನ ಐದು ವರ್ಷ ನನಗೆ ಅಧಿಕಾರ ಕೊಡಿ. ಈ ಕ್ಷೇತ್ರವನ್ನು ಮಾದರಿ ಮಾಡುತ್ತೇನೆ. ಹಿಂದುಳಿದ ತಾಲೂಕು ಎಂದು ಹಣೆಪಟ್ಟಿ ಹೊತ್ತಿರುವ ಕೋಟೆ ಕ್ಷೇತ್ರಕ್ಕೆ ಹೆಚ್ಚಿನ ಅನುದಾನ ತಂದು ಅಭಿವೃದ್ಧಿ ಮಾಡುತ್ತೇನೆ ಎಂದು ಭರವಸೆ ನೀಡಿದರು.
    ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಚ್.ಸಿ.ಲಕ್ಷ್ಮಣ್, ತಾಲೂಕು ಬಿಜೆಪಿ ಅಧ್ಯಕ್ಷ ಗುರುಸ್ವಾಮಿ, ತಾಪಂ ಮಾಜಿ ಅಧ್ಯಕ್ಷ ಸಿ.ಕೆ.ಗಿರೀಶ್, ಮೊತ್ತಬಸವರಾಜಪ್ಪ, ಮನುಗನಹಳ್ಳಿ ಮಂಜು, ಗ್ರಾಪಂ ಉಪಾಧ್ಯಕ್ಷ ಎಚ್.ಡಿ. ಮಹೇಶ್, ಲಂಕೆ ರಮೇಶ್, ಶಿವಮಾದು, ಸೋಮುರೈ, ದೊಡ್ಡಯ್ಯ,ಕೆ.ಟಿ.ಹರೀಶ್, ರವೀಶ್, ನಾಗರಾಜು, ಶಿವಯ್ಯ, ಮುಳ್ಳೂರು ನಿಂಗರಾಜು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts