More

    ಅಮೀನಗಡದಲ್ಲಿ ಸಾಂಸ್ಕೃತಿಕ ಸೌರಭ

    ಬಾಗಲಕೋಟೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ನ.೭ ರಂದು ಅಮೀನಗಡದ ಬನಶಂಕರಿ ದೇವಿ ಗುಡಿಯ ಆವರಣದಲ್ಲಿರುವ ಶಿವಾಚಾರ ದೇವಾಂಗ ಸಮಾಜದ ಕಲ್ಯಾಣ ಮಂಟಪದಲ್ಲಿ ಸಾಂಸ್ಕೃತಿಕ ಸೌರಭ-೨೦೨೨ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
    ಅಂದು ಬೆಳಗ್ಗೆ ೧೧ ಗಂಟೆಗೆ ಜರಗುವ ಕಾರ್ಯಕ್ರಮವನ್ನು ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಉದ್ಘಾಟಿಸಲಿದ್ದಾರೆ. ಶಾಸಕ ವೀರಣ್ಣ ಚರಂತಿಮಠ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ, ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿದ್ದು ಸವದಿ, ಸಂಸದ ಪಿ.ಸಿ.ಗದ್ದಿಗೌಡರ ಸೇರಿದಂತೆ ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಹಾಗೂ ಇತರೆ ಗಣ್ಯಮಾನ್ಯರು ಆಗಮಿಸಲಿದ್ದಾರೆ.
    ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಬಸವರಾಜ ಭಜಂತ್ರಿ ಅವರಿಂದ ಶಹನಾಯಿ ವಾದನ, ಗಣೇಶ ರಾಯಬಾಗಿಯಿಂದ ಸುಗಮ ಸಂಗೀತ, ಮಲ್ಲಿಕಾರ್ಜುನ ಯರಗೇರಿ ತಂಡದಿಂದ ಜಾನಪದ ಗಾಯನ, ಲ ಗೌಡರ ತಂಡದಿಂದ ನೃತ್ಯ ರೂಪಕ ಹಾಗೂ ಕರಡಿ ಮಜಲು, ಹಲಗಿ ಮಜಲು, ಡೊಳ್ಳಿನ ಕುಣಿತ ಜಾನಪದ ಕಲಾತಂಡಗಳಿಂದ ಕಾರ್ಯಕ್ರಮ ನಡೆಯಲಿದೆ. ಸಿರಿಗೇರಿಯ ಧಾಂತ್ರಿರಂಗ ಸಂಸ್ಥೆ ಶಿವರಾಜ ಮತ್ತು ತಂಡ ಬಳ್ಳಾರಿ ಅವರಿಂದ ನಾಟಕ ಪ್ರದರ್ಶನ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕರ್ಣಕುಮಾರ ಜೈನಾಪುರ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts