More

    ಅರ್ಹತೆಗೆ ತಕ್ಕಂತಹ ಹುದ್ದೆ ಪಡೆಯಿರಿ

     

    ಹೂವಿನಹಡಗಲಿ: ತಾಲೂಕಿನ ಗ್ರಾಮೀಣ ಭಾಗದ ವಿದ್ಯಾವಂತ ಅಂಗವಿಕಲರು ಸಹ ಉದ್ಯೋಗ ಹೊಂದುವ ಮೂಲಕ ಆರ್ಥಿಕವಾಗಿ ಶಕ್ತರಾಗಬೇಕು ಎಂದು ಮಹತ್ಮಾಗಾಂಧಿ ನಗರ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಟ್ರಸ್ಟ್ ಪ್ರಧಾನ ಕಾರ್ಯದರ್ಶಿ ಕೃಷ್ಣಾನಾಯ್ಕ ಹೇಳಿದರು.

    ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ಮಹತ್ಮಾಗಾಂಧಿ ನಗರ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಟ್ರಸ್ಟ್ ಶನಿವಾರ ಆಯೋಜಿಸಿದ್ದ ಉದ್ಯೋಗಮೇಳ ಮತ್ತು ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಾತನಾಡಿದರು.

    ಪ್ರಸ್ತುತ ದಿನಗಳಲ್ಲಿ ವಿದ್ಯಾವಂತ ಯುವಕ, ಯುವತಿಯರು ತಮ್ಮ ವಿದ್ಯೆಗೆ ಅನುಗುಣವಾದಂತಹ ಹುದ್ದೆಗಳನ್ನು ಹುಡುಕುವಲ್ಲಿ ವಿಫಲರಾಗಿದ್ದಾರೆ. ಕೇವಲ ಸಣ್ಣ ಉದ್ಯಮಗಳಲ್ಲಿ ಕಡಿಮೆ ಸಂಬಳಕ್ಕೆ ದುಡಿಯುವ ಪರಿಸ್ಥಿತಿ ಉಂಟಾಗಿದೆ. ಅರ್ಹತೆಗೆ ತಕ್ಕಂತಹ ಹುದ್ದೆಯನ್ನು ದೊರಕಿಸುವ ನಿಟ್ಟಿನಲ್ಲಿ ಈ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

    ಅಂಗವೈಕಲ್ಯ ಮೆಟ್ಟಿ ನಿಂತು ನಾವು ಸಾಮಾನ್ಯರಂತೆ ಸಂಪಾದಿಸಬಹುದು ಎಂಬ ಮನೋಭಾವನೆಯನ್ನು ಹೊಂದಬೇಕು. ಅಂಗವೈಕಲ್ಯ ಶಾಪವಲ್ಲ ಎಂದು ಭಾವಿಸಿ ಎಲ್ಲರಂತೆ ದುಡಿಯುವವರಿಗೆ ಉದ್ಯೋಗಗಳನ್ನು ಕಲ್ಪಿಸಲಾಗಿದೆ. ಗೃಹಿಣಿಯರು ಕಸೂತಿ ಕಲೆಯಂತಹ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡಲು ತರಬೇತಿಗಳನ್ನು ನೀಡಲಾಗುವುದು. ಗ್ರಾಮೀಣ ಭಾಗದ ಜನತೆ ವಿವಿಧ ಕಾಯಿಲೆಗಳಿಗೆ ತುತ್ತಾಗಿ ಅವುಗಳಿಗೆ ಸೂಕ್ತ ಚಿಕಿತ್ಸೆ ಪಡೆಯದಾಗದೆ ಪರಿತಪಿಸುತ್ತಿದ್ದಾರೆ. ಇದನ್ನು ಗಮನಿಸಿ ಎಲ್ಲರಿಗೂ ಅನುಕೂಲವಾಗುವಂತಹ ವೈದ್ಯರಿಂದ ಸೂಕ್ತ ಚಿಕಿತ್ಸೆ ಕೊಡಿಸುವ ಪ್ರಯತ್ನವನ್ನು ಮಾಡಲಾಗಿದೆ ಎಂದರು.

    ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಸಿ.ಕೊಂಡಯ್ಯ, ಗವಿಮಠದ ಹಿರಿಶಾಂತವೀರ ಸ್ವಾಮೀಜಿ, ಹಿರೇಮಲ್ಲಕೆರಿ ವಿರಕ್ತ ಮಠದ ಚನ್ನವೀರಸ್ವಾಮೀಜಿ, ಫಾದರ್ ವಿಲಿಯಂ ಡೆಂಜಿಲ್, ಡಾ.ಧನಂಜಯ್, ನಟ ಡಾಲಿ ಧನಂಜಯ, ಕ್ರಾಂತಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts