More

    ಆಟೋಟದಲ್ಲಿ ಮಿಂದೆದ್ದ ಕ್ರೀಡಾಪಟುಗಳು

    ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣ ಪಾರಂಪರಿಕ ದಸರಾ ಪ್ರಯುಕ್ತ ತಾಲೂಕು ಕ್ರೀಡಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಕ್ರೀಡಾ ದಸರಾವನ್ನು ಶಾಸಕ ರವೀಂದ್ರ ಶ್ರೀಕಂಠಯ್ಯ ಉದ್ಘಾಟಿಸಿದರು.

    ಕ್ರೀಡಾಕೂಟಲ್ಲಿ ಕಬಡ್ಡಿ, ಖೋ ಖೋ, ವಾಲಿಬಾಲ್ ಇನ್ನಿತರ ಸ್ಪರ್ಧೆಗಳು ನಡೆದವು. ನೂರಾರು ಕ್ರೀಡಾಪಟುಗಳು ಭಾಗವಹಿಸಿದ್ದರು. ಸಿಇಒ ಶಾಂತಾ ಎಲ್.ಹುಲ್ಮನಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಓಂ ಪ್ರಕಾಶ್, ಪಾಂಡವಪುರ ಉಪವಿಭಾಗಾಧಿಕಾರಿ ಬಿ.ಸಿ.ಶಿವಾನಂದ ಮೂರ್ತಿ , ತಾಪಂ ಇಒ ವೇಣು, ಪುರಸಭೆ ಅಧ್ಯಕ್ಷೆ ನಿರ್ಮಲಾ ವೇಣುಗೋಪಾಲ್, ಸದಸ್ಯರಾದ ಪ್ರಕಾಶ್, ನಿಂಗರಾಜು ಉಪಸ್ಥಿತರಿದ್ದರು.

    ಕರೀಘಟ್ಟ ಬೆಟ್ಟಕ್ಕೆ ಚಾರಣ: ತಾಲೂಕಿನ ಪ್ರಕೃತಿ ತಾಣದ ಕರೀಘಟ್ಟಕ್ಕೆ ಚಾರಣ ಸ್ಪರ್ಧೆ ಹಮ್ಮಿಕೊಳ್ಳಲಾಗಿತ್ತು. ಸ್ಪರ್ಧೆಯಲ್ಲಿ 160ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ್ದರು. ಅಚೀವರ್ಸ್ ಅಕಾಡೆಮಿ ಸಂಸ್ಥಾಪಕ ಡಾ.ಆರ್ ರಾಘವೇಂದ್ರ ನೇತೃತ್ವದಲ್ಲಿ ನಡೆದ ಚಾರಣಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಓಂ ಪ್ರಕಾಶ್ ಹಾಗೂ ವಕೀಲೆ ಆಶಾಲತಾ ಪುಟ್ಟೇಗೌಡ ಚಾಲನೆ ನೀಡಿದರು. ಸಾಹಿತ್ಯ ಪರಿಷತ್ತಿನ ನಗರ ಘಟಕದ ಅಧ್ಯಕ್ಷೆ ಸಾವಿತ್ರಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts