More

    ಆಟೋ ಚಾಲಕರು, ಮಾಲೀಕರ ಸಂಘದ ವಾರ್ಷಿಕ ಮಹಾಸಭೆ

    ಸೋಮವಾರಪೇಟೆ: ಆಟೋ ಚಾಲಕರು ಹಾಗೂ ಮಾಲೀಕರ ಸಂಘದ ವಾರ್ಷಿಕ ಮಹಾಸಭೆಯು ಭಾನುವಾರ ಸ್ಥಳೀಯ ಕೊಡವ ಸಮಾಜದಲ್ಲಿ ನಡೆಯಿತು.
    ಸಂಘದ ಅಧ್ಯಕ್ಷ ಎಚ್.ಕೆ. ಗಂಗಾಧರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಹೊಸ ಸದಸ್ಯತ್ವ ಶುಲ್ಕ, ಸಂಘದ ಸದಸ್ಯರ ವೈದ್ಯಕೀಯ ವೆಚ್ಚ, ಮರಣ ನಿಧಿ ವಂತಿಗೆ ಕುರಿತು ಚರ್ಚೆ ನಡೆಯಿತು. ಸಂಘದ ಅಭಿವೃದ್ಧಿ ಕುರಿತು ಹಿರಿಯ ಸದಸ್ಯರು ಸಲಹೆ ನೀಡಿದರು.
    ಉಪಾಧ್ಯಕ್ಷ ಟಿ.ಎಂ. ಅಬ್ದುಲ್ ಕರೀಂ, ಪ್ರಧಾನ ಕಾರ್ಯದರ್ಶಿ ಬಿ.ಎಸ್. ಜನಾರ್ದನ್, ಉಪಕಾರ್ಯದರ್ಶಿ ರಮೇಶ್, ಖಜಾಂಚಿ ಸುದೀಪ್ ಆಲ್ಬರ್ಟ್, ಸಹ ಕಾರ್ಯದರ್ಶಿ ಪ್ರಭಾಕರ್ ಸೇರಿದಂತೆ ಮಾಜಿ ಅಧ್ಯಕ್ಷರು, ಗೌರವ ಸಲಹೆಗಾರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts