More

    ಆಧಾರ್ ಲಿಂಕ್ ಅದೇಶ ಹಿಂಪಡೆಯಿರಿ

    ಶಿವಮೊಗ್ಗ: ಪಾನ್ ಕಾರ್ಡ್‌ಗೆ ಆಧಾರ್ ಲಿಂಕ್ ಮಾಡಲು ಒಂದು ಸಾವಿರ ರೂ. ದಂಡ ವಿಧಿಸುವ ಆದೇಶವನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ನವಕರ್ನಾಟಕ ನಿರ್ಮಾಣ ವೇದಿಕೆ ಪ್ರಮುಖರು ಬುಧವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

    ಕೇಂದ್ರ ಸರ್ಕಾರ ಐದು ವರ್ಷಗಳ ಹಿಂದೆ ಪಾನ್ ಕಾರ್ಡ್‌ಗೆ ಆಧಾರ್ ಲಿಂಕ್ ಮಾಡಬೇಕೆಂದು ಆದೇಶಿಸಿತ್ತು. ಸಾಮಾನ್ಯ ಜನರಿಗೆ ಇದರ ಬಗ್ಗೆ ಹೆಚ್ಚಿನ ಮಾಹಿತಿ ಇರಲಿಲ್ಲಿ. ಹೀಗಾಗಿ ಇಂದಿಗೂ ದೇಶದಲ್ಲಿ ಸಾಕಷ್ಟು ಮಂದಿ ಲಿಂಕ್ ಮಾಡಿಸಿಲ್ಲ. ಜನರಿಗೆ ಇದರ ಬಗ್ಗೆ ಜಾಗೃತಿ ಮೂಡಿಸದೇ ಈಗ ಲಿಂಕ್ ಮಾಡಲು ಮುಂದಾದವರಿಗೆ ಒಂದು ಸಾವಿರ ರೂ. ದಂಡ ವಿಧಿಸುತ್ತಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ದಂಡ ಸಂಗ್ರಹದಿಂದ ಕೇಂದ್ರ ಸರ್ಕಾರಕ್ಕೆ ನೂರಾರು ಕೋಟಿ ರೂ. ಹಣ ಸಂಗ್ರಹವಾಗಿದೆ. ಕೇಂದ್ರ ಸರ್ಕಾರ ಜನರಲ್ಲಿ ಜಾಗೃತಿ ಮೂಡಿಸಬೇಕು. ದಂಡ ಸಹಿತವಾಗಿ ಆಧಾರ್ ಲಿಂಕ್ ಆದೇಶ ಹಿಂಪಡೆದು ಸರಳವಾಗಿ ಲಿಂಕ್ ಮಾಡಲು ಅವಕಾಶ ನೀಡುವ ಮೂಲಕ ಜನರ ಮೇಲಿನ ಹೊರೆಯನ್ನು ತಗ್ಗಿಸಬೇಕೆಂದು ಒತ್ತಾಯಿಸಿದರು.
    ರಾಜ್ಯಾಧ್ಯಕ್ಷ ಗೋ.ರಮೇಶ್ ಗೌಡ, ಜಿಲ್ಲಾಧ್ಯಕ್ಷ ಸಂತೋಷ್, ಕಾರ್ಯಾಧ್ಯಕ್ಷ ಲಿಂಗರಾಜ್, ಮಹಿಳಾ ಘಟಕದ ಅಧ್ಯಕ್ಷೆ ನಯನಾ, ಗ್ರಾಮಾಂತರ ಘಟಕದ ಅಧ್ಯಕ್ಷ ಲಕ್ಷ್ಮಣ್ ಮುಂತಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts