More

    ಆರೋಗ್ಯದ ದೃಷ್ಟಿಯಿಂದ ರ‌್ಯಾಲಿ ಆಯೋಜನೆ

    ಚಿಕ್ಕೋಡಿ: ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರ 75ನೇ ಜನ್ಮದಿನದ ಅಂಗವಾಗಿ ಚಿಕ್ಕೋಡಿ ಕೆ.ಎಲ್.ಇ ಅಂಗ ಸಂಸ್ಥೆ ವತಿಯಿಂದ ಸ್ವಸ್ಥ ಭಾರತ, ಸಮೃದ್ಧ ಭಾರತ ೋಷವಾಕ್ಯದೊಂದಿಗೆ ಸಂಸ್ಥೆಯ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳಿಗೆ ಸೈಕಲ್ ರ‌್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಕೆ.ಎಲ್.ಇ ಇಂಜಿನಿಯರಿಂಗ್ ಕಾಲೇಜಿನ ಪ್ರಾಚಾರ್ಯ ಡಾ. ಪ್ರಸಾದ ರಾಂಪುರೆ ಹೇಳಿದರು.

    ಕೆಎಲ್‌ಇ ಸಂಸ್ಥೆಯಿಂದ ಪಟ್ಟಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಸೈಕಲ್ ರ‌್ಯಾಲಿಯಲ್ಲಿ ಮಾತನಾಡಿದ ಅವರು, ಸಂಸ್ಥೆಯ ಸಿಬ್ಬಂದಿ ಆರೋಗ್ಯದ ದೃಷ್ಟಿಯಿಂದ ಈ ಸೈಕಲ್ ರ‌್ಯಾಲಿ ಹಮ್ಮಿಕೊಳ್ಳಲಾಗಿತ್ತು ಎಂದರು.

    ಕೆಎಲ್‌ಇ ಸಂಸ್ಥೆಯ ನಿರ್ದೇಶಕ ಬಸವರಾಜ ಪಾಟೀಲ, ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಕೋರೆ ರ‌್ಯಾಲಿಗೆ ಚಾಲನೆ ನೀಡಿದರು. ಹೆಸ್ಕಾಂ ನಿರ್ದೇಶಕ ಮಹೇಶ ಭಾತೆ, ಪ್ರಾಚಾರ್ಯ ಪ್ರೊ. ಉದಯಸಿಂಗ ರಜಪುತ, ಪ್ರಕಾಶ ಕೋಳಿ, ಪ್ರೊ. ದುಂಡಪ್ಪ ಸೋಲಾಪುರೆ, ಪ್ರೊ. ವೆಂಕಟ ರೆಡ್ಡಿ, ಪ್ರೊ. ಅಮರ ಪಶುಪತಿಮಠ, ಪ್ರೊ. ಚೇತನ ಅಲವಾಡೆ, ಪ್ರೊ. ವಿನಾಯಕ ಪಾಟೀಲ ಸೇರಿ 300 ಜನ ರ‌್ಯಾಲಿಯಲ್ಲಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts