More

    ಇಳಕಲ್ಲ ಸಾಂತ್ವನ ಕೇಂದ್ರಕ್ಕೆ ನೋಟಿಸ್

    ಬಾಗಲಕೋಟೆ: ಅಧಿಕಾರಿಗಳಿಗೆ ಸಮರ್ಪಕ ಮಾಹಿತಿ ನೀಡದೇ ಬೇಜವಾಬ್ದಾರಿತನ ತೋರುತ್ತಿರುವ ಇಳಕಲ್ಲಿನ ಆಶಾದೀಪ ಅಂಗವಿಕಲರ ಸರ್ವ ಅಭಿವೃದ್ದಿ ಸೇವಾ ಸಂಸ್ಥೆಯ ಮಹಿಳಾ ಸಾಂತ್ವನ ಕೇಂದ್ರಕ್ಕೆ ನೋಟಿಸ್ ನೀಡುವಂತೆ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸಾಂತ್ವನ ಕೇಂದ್ರದಲ್ಲಿ ದಾಖಲಾದ ಪ್ರಕರಣ, ವರ್ಗಾವಣೆಗೊಂಡ ಪ್ರಕರಣಗಳ ಮಾಹಿತಿಗಳ ಬಗ್ಗೆ ಸರಿಯಾದ ಮಾಹಿತಿ ನೀಡದೇ ಇರುವುದು, ಅಲ್ಲದೇ ಸಂಬಂಧಿಸಿದವರನ್ನು ಸಭೆಗೆ ಕಳುಹಿಸದೇ ಪ್ರತಿನಿಧಿಗಳನ್ನು ಕಳುಹಿಸಿರುವದನ್ನು ಕಂಡು ನೋಟಿಸ್ ನೋಟಿಸ್ ನೀಡುವಂತೆ ಸೂಚಿಸಿದರು.

    ವರದಕ್ಷಿಣೆ, ಲೈಂಗಿಕ ಕಿರಕುಳ, ಕೌಟುಂಬಿಕ ಕಲಹ ಸೇರಿದಂತೆ ಜನವರಿ ಅಂತ್ಯಕ್ಕೆ ಒಟ್ಟು 791 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 725 ಇತ್ಯರ್ಥವಾಗಿವೆ. ಬಾಕಿ ಉಳಿಸಿಕೊಂಡವರಲ್ಲಿ ಇಳಕಲ್ಲ ಸಾಂತ್ವನ ಕೇಂದ್ರದ್ದು 25 ಇವೆ. ಪೊಲೀಸ್ ಇಲಾಖೆಗೆ ವರ್ಗಾವಣೆ ಮಾಡಿದ ಪ್ರಕರಣಗಳಲ್ಲಿ ಬಾಕಿ 8 ಪ್ರಕರಣಗಳು ಕಂಡುಬಂದಿದ್ದು, ಇತ್ಯರ್ಥವಾಗದಕ್ಕೆ ಕಾಣರವೇನು ಎಂದು ಪ್ರಶ್ನಿಸಿದರು. ಈ ಬಗ್ಗೆ ಸಮರ್ಪಕ ಮಾಹಿತಿ ನೀಡದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

    ಆಯಾ ತಾಲೂಕಿನ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ಪ್ರತಿ 15 ದಿನಗಳಿಗೊಮ್ಮೆ ಸಾಂತ್ವನ ಕೇಂದ್ರಗಳಿಗೆ ಭೇಟಿ ನೀಡಿ ಮೂಲಭೂತ ಸೌಲಭ್ಯ, ಆಹಾರ ವಿತರಣೆ, ಶಿಕ್ಷಣದ ಬಗ್ಗೆ ಪರಿಶೀಲನೆ ನಡೆಸಬೇಕು. ಸಮಾಲೋಚನೆ ಸಹ ನಡೆಸಬೇಕು. ಜಮಖಂಡಿ ಹಾಗೂ ರಬಕವಿ-ಬನಹಟ್ಟಿ ತಾಲೂಕುಗಳಲ್ಲಿ ಹೊಸ ಸಾಂತ್ವನ ಕೇಂದ್ರಗಳನ್ನು ಸ್ಥಾಪಿಸಲು ಪ್ರಸ್ತಾವನೆಗಳು ಬಂದಿದ್ದು, ಸೂಕ್ತ ದಾಖಲೆಗಳನ್ನು ಪರಿಶೀಲಿಸಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಸಿಇಓ ಅಧಿಕಾರಿಗಳಿಗೆ ಸೂಚಿಸಿದರು. ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿರುವ ಸ್ತ್ರೀಶಕ್ತಿ ಗುಂಪು ಹಾಗೂ ತಾಲೂಕು ಒಕ್ಕೂಟದ ರಾಜ್ಯ ಮಟ್ಟದ ಪ್ರಶಸ್ತಿಗೆ ಪ್ರಸ್ತಾವನೆಗಳನ್ನು ಕಳುಹಿಸಲು ತಿಳಿಸಿದರು.

    ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ದ್ಯಾವಪ್ಪ ಎಸ್.ಬಿ ಮಾತನಾಡಿ ಸಾಂತ್ವನ ಕೇಂದ್ರಗಳು ಅಚ್ಚುಕಟ್ಟಾಗಿ ನಡೆಸಬೇಕು. ಕೇವಲ ದಾಖಲೆಯಲ್ಲಿ ಅಂಕಿ-ಸಂಖ್ಯೆಗಳನ್ನು ತೋರಿಸಿದರೆ ಸರಿಯಲ್ಲ. ಭೇಟಿ ಸಮಯದಲ್ಲಿ ಮೆನುವಿನ ಪ್ರಕಾರ ಊಟ, ಉಪಹಾರ ನೀಡದಿರುವದನ್ನು ಮನಗಂಡಿದ್ದು, ಕಡ್ಡಾಯವಾಗಿ ಮೆನುವಿನ ಪ್ರಕಾರ ನೀಡಲು ಕ್ರಮವಹಿಸಬೇಕು. ಅಲ್ಲದೇ ಅಂಗನವಾಡಿ ಕೇಂದ್ರಗಳಲ್ಲಿ ಭೇಟಿ ನೀಡುವ ಮೂಲಕ ಮಕ್ಕಳ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿರುವ ಬಗ್ಗೆ ಪರಿಶೀಲನೆ ನಡೆಸಬೇಕು. ಅಂಗನವಾಡಿ ಕೇಂದ್ರಗಳ ಮೇಲೆ ಹೆಚ್ಚಿನ ಕಾಳಜಿ ವಹಿಸಲು ಸೂಚಿಸಿದರು.

    ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಮರಟ್ಟಿ, ಜಂಟಿ ಕೃಷಿ ನಿರ್ದೇಶಕ ಲಕ್ಷ್ಮಣ ಕಳ್ಳೇನವರ, ಆಯಾ ತಾಲೂಕಿನ ಶಿಶು ಅಭಿವೃಧ್ದಿ ಯೋಜನಾಧಿಕಾರಿಗಳು, ಸಾಂತ್ವನ ಕೇಂದ್ರದ ಪ್ರತಿನಿಧಿಗಳು ಸೇರಿದಂತೆ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts