More

    ಇ-ಸರ್ವೇ ಕೆಲಸದಿಂದ ಕೈಬಿಡಲು ಆಗ್ರಹ -ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ 27ಕ್ಕೆ 

    ದಾವಣಗೆರೆ: ಆರೋಗ್ಯ ಇಲಾಖೆಯ ಇ-ಸರ್ವೇ ಕೆಲಸದಿಂದ ಕೈಬಿಡುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಷನ್ ಜೂ. 27ರಂದು ರಾಜ್ಯದ ಎಲ್ಲ ಜಿಲ್ಲೆ ಹಾಗೂ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಿದೆ.
    ಫೆಡರೇಷನ್ ಜಿಲ್ಲಾಧ್ಯಕ್ಷೆ ಎಂ.ಬಿ.ಶಾರದಮ್ಮ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಅನುಷ್ಠಾನಕ್ಕಾಗಿ ನಾಲ್ಕು ವರ್ಷದ ಹಿಂದೆ ಅಂಗನವಾಡಿ ಕಾರ್ಯಕರ್ತೆಯರಿಗೆ ನೀಡಿದ್ದ ಮೊಬೈಲ್‌ಗಳು ಕಳಪೆಯದಾಗಿದ್ದು ಅದರಲ್ಲಿ ಮಾಹಿತಿ ಸಂಗ್ರಹ ಸೇರಿ ಇತರೆ ಕೆಲಸ ಮಾಡುವುದು ಕಷ್ಟಸಾಧ್ಯವಾಗಿದೆ. ಕೂಡಲೆ ಇದರ ಬದಲಾಗಿ ಹೊಸ ಮೊಬೈಲ್ ಅಥವಾ ಮಿನಿ ಟ್ಯಾಬ್‌ಗಳನ್ನು ವಿತರಿಸಬೇಕೆಂದು ಆಗ್ರಹಿಸಿದರು.
    ಆರೋಗ್ಯ ಇಲಾಖೆಯ ಸಮೀಕ್ಷೆಯನ್ನು ಅಂಗನವಾಡಿ ಕಾರ್ಯಕರ್ತೆಯರು ನಿರ್ವಹಿಸಿ ಅವರ ಮೊಬೈಲ್‌ಗಳಲ್ಲಿ ಮಾಹಿತಿ ಅಪ್‌ಲೋಡ್ ಮಾಡುವಂತೆ ಒತ್ತಡ ಹಾಕಲಾಗುತ್ತಿದೆ. ಸಮೀಕ್ಷೆ ಮಾಡದಿದ್ದಲ್ಲಿ ಗೌರವಧನ ಕಡಿತಗೊಳಿಸುವ, ಶಿಸ್ತುಕ್ರಮ ಕೈಗೊಳ್ಳುವ ಬೆದರಿಕೆ ಒಡ್ಡಲಾಗುತ್ತಿದೆ. ಈ ಕಾರ್ಯಕ್ಕೆ ಬಳಸಿಕೊಳ್ಳಬಾರದು ಎಂದು ಒತ್ತಾಯಿಸಿದರು.
    ಎನ್‌ಆರ್‌ಸಿ ಕೇಂದ್ರಕ್ಕೆ ಮಕ್ಕಳನ್ನು ಸೆರಿಸಿದ ಹಿನ್ನೆಲೆಯಲ್ಲಿ ಆಸ್ಪತ್ರೆಯ ಅಡುಗೆ ಕೆಲಸಕ್ಕೆ ಅಂಗನವಾಡಿ ಸಹಾಯಕಿಯರನ್ನು ತೆಗೆದುಕೊಳ್ಳಬಾರದು. ಬಾಡಿಗೆ ಕಟ್ಟಡಗಳಲ್ಲಿರುವ ಅಂಗನವಾಡಿ ಕೇಂದ್ರಗಳ ಬಾಕಿ ಇರುವ ಬಾಡಿಗೆ ಹಣವನು ಬಿಡುಗಡೆಗೊಳಿಸಬೇಕು. ಧೀರ್ಗಕಾಲ ಒಂದೇ ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು-ಮೇಲ್ವಿಚಾರಕಿಯರು ಸೇರಿ ಎಲ್ಲ ಸಿಬ್ಬಂದಿಯನ್ನು ವರ್ಗಾವಣೆಗೊಳಿಸಬೇಕು.
    ಅಂಗನವಾಡಿಗಳಿಗೆ ಪೂರೈಸುವ ಮೊಟ್ಟೆ ಟೆಂಡರ್ ಪರಿಣಾಮ ಮೊಟ್ಟೆಗಳು ಕಡಿಮೆ ಗಾತ್ರ ಹಾಗೂ ಕಳಪೆಯಾಗಿವೆ. ಇದು ಮಕ್ಕಳ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವುದರಿಂದ ಸಕಾಲಕ್ಕೆ ಸರಬರಾಜು ಮಾಡದಿರುವುದರಿಂದ ಮೊಟ್ಟೆ ಖರೀದಿಯ ಜವಾಬ್ದಾರಿಯನ್ನು ಬಾಲವಿಕಾಸ ಸಮಿತಿಗೆ ನೀಡಬೇಕು. ಸರ್ಕಾರ ಘೋಷಿಸಿದಂತೆಯೇ ಅಂಗನವಾಡಿ ಕಾರ್ಯಕರ್ತರು-ಸಹಾಯಕಿಯರಿಗೆ ಮಾಸಿಕ 15 ಸಾವಿರ ರೂ. ಹೆಚ್ಚಿಸಬೇಕು ಎಂದು ಆಗ್ರಹಿಸಿದರು.
    ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ಮಲ್ಲಮ್ಮ, ಖಜಾಂಚಿ ವಿಶಾಲಾಕ್ಷಿ, ಆವರಗೆರೆ ವಾಸು, ಕೆ.ಸಿ.ನಿರ್ಮಲಾಮ, ಗೀತಾ, ಸರ್ವಮ್ಮ, ಆವರಗೆರೆ ವಾಸು, ಜಿ. ರೇಣುಕಮ್ಮ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts