More

    ಉಚಿತ ಆರೋಗ್ಯ ತಪಾಸಣಾ ಶಿಬಿರ

    ಆಲೂರು: ಸಮಾಜ ಸುಸ್ಥಿರವಾಗಿರಲು ಪ್ರತಿಯೊಬ್ಬರ ಆರೋಗ್ಯದಾಯಕ ಜೀವನ ಮುಖ್ಯ ಎಂದು ಆಲೂರು-ಸಕಲೇಶಪುರ ಶಾಸಕ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ. ಕುಮಾರಸ್ವಾಮಿ ಅಭಿಪ್ರಾಯಪಟ್ಟರು.

    ತಾಲೂಕಿನ ಕೆ.ಹೊಸಕೋಟೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಾಸನ ಜಿಲ್ಲಾ ಪ್ಲಾಂಟರ್ಸ್ ಸಂಘ, ಪ್ಲಾಂಟರ್ಸ್ ಸಂಘ ಸಕಲೇಶಪುರ, ವೈದ್ಯಕೀಯ ಮಹಾವಿದ್ಯಾಲಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆಲೂರು ತಾಲೂಕು ಕಾಫಿ ಬೆಳೆಗಾರರ ಸಂಘ, ಹಾಸನದ ಡಬ್ಲೂೃಸಿಪಿಸಿ ಕೇರ್ ಸೂಫೆ ಸ್ಪೆಷಾಲಿಟಿ ಆಸ್ಪತ್ರೆ ಸಹಯೋಗದಲ್ಲಿ ಆಯೋಜಿಸಿದ್ದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

    ಕಾಫಿ ಬೆಳೆಗಾರರು ಅನೇಕ ಸಂಕಷ್ಟಗಳನ್ನು ಎದುರಿಸುತ್ತಿದ್ದು, ಕೇಂದ್ರ ಸರ್ಕಾರ ಕಾಫಿ ಬೆಳೆಗಾರರಿಗೆ ಆರ್ಥಿಕ ನೆರವು ನೀಡಬೇಕು ಎಂದು ಒತ್ತಾಯಿಸಿದರು.

    ಇದೇ ಸಂದರ್ಭದಲ್ಲಿ ಶಾಸಕ ಎಚ್.ಕೆ. ಕುಮಾರಸ್ವಾಮಿ ಹಾಗೂ ಜಿಲ್ಲಾ ಕಾಫಿ ಬೆಳೆಗಾರರ ಸಂಘದ ಅಧ್ಯಕ್ಷ ತೋ.ಚ. ಅನಂತ ಸುಬ್ಬರಾವ್ ಆರೋಗ್ಯ ತಪಾಸಣೆಗೆ ಒಳಗಾದರು.

    ಆಲೂರು ತಾಲೂಕು ತಹಸೀಲ್ದಾರ್ ಶಿರೀನ್ ತಾಜ್, ಜಿಲ್ಲಾ ಕಾಫಿ ಬೆಳೆಗಾರರ ಸಂಘದ ತಾಲೂಕು ಅಧ್ಯಕ್ಷೆ ಸುಜಾತಾ ಕುಮಾರ್, ಕಾರ್ಯದರ್ಶಿ ನಂದಿನಿ ಹೆದ್ದುರ್ಗ, ಮಲ್ಲಪುರ ಗ್ರಾಪಂ ಸದಸ್ಯ ವಿವೇಕ್ ವೈದ್ಯನಾಥ್, ಹಾಸನ ವೈದ್ಯಕೀಯ ಮಹಾವಿದ್ಯಾಲಯದ ಶಸ್ತ್ರಚಿಕಿತ್ಸಕ ಕೃಷ್ಣಮೂರ್ತಿ, ಡಾ.ಈಶ್ವರ್ ಪ್ರಸಾದ್, ಡಾ.ಪ್ರದೀಪ್ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts