ವಿಜಯವಾಣಿ ಸುದ್ದಿಜಾಲ ಉಡುಪಿ
ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಿಎಎ, ಎನ್ಆರ್ಸಿ ವಿರೋಧಿಸಿ ಶಾಹಿನ್ ಬಾಗ್ ಮಾದರಿಯ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಕರಿಸಿದ್ಧಾರೆ.ನಗರ ಮದ್ಯೆ ಖಾಸಗಿ ಸ್ಥಳದಲ್ಲಿ ಫೆ. 22, ಸಾಯಂಕಾಲ 5 ಗಂಟೆಯಿಂದ ಪ್ರತಿಭಟನೆಗೆ ಸಿದ್ಧತೆ ನಡೆದಿತ್ತು. ಕಾನೂನು ಸುವ್ಯವಸ್ಥೆ ಕಾರಣ ನೀಡಿ ಪೊಲೀಸರು ಅನುಮತಿ ನೀಡಿಲ್ಲ . ಪ್ರತಿಭಟನೆ ಅಯೋಜಿಸಲು ನಿರ್ಧರಿಸಲಾಗಿದ್ದ ಸ್ಥಳದಲ್ಲಿ ಶಾಮಿಯಾನ ಹಾಕಿದ್ದರು. ಸ್ಥಳಕ್ಕೆ ವೃತ್ತ ನಿರೀಕ್ಷಕ ಮಂಜುನಾಥ್ ಆಗಮಿಸಿ ಆಯೋಜಕರಿಗೆ ಶಾಮಿಯಾನ ತೆರವುಗೊಳಿಸಿ, ಪ್ರತಿಭಟನೆ ನಡೆಸದಂತೆ ಸೂಚಿಸಿದರು. ಅಧಿಕ ಸಂಖ್ಯೆಯಲ್ಲಿ ಪೊಲೀಸರನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು.