ಚಿಕ್ಕೋಡಿ: ಯುವಕರ ಏಳಿಗೆಯ ಜತೆಗೆ ಉತ್ತಮ ಸಮಾಜ ನಿರ್ಮಾಣಕ್ಕಾಗಿ ಬಸವ ಜ್ಯೋತಿ ಯೂಥ್ ಫೌಂಡೇಷನ್ ಸ್ಥಾಪಿಸಲಾಗಿದೆ ಎಂದು ಫೌಂಡೇಶನ್ ಅಧ್ಯಕ್ಷ ಬಸವ ಪ್ರಸಾದ ಜೊಲ್ಲೆ ಹೇಳಿದರು. ನಿಪ್ಪಾಣಿ ತಾಲೂಕಿನ ಬಾರವಾಡ ಗ್ರಾಮದಲ್ಲಿ ಫೌಂಡೇಷನ್ ಶಾಖೆ ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಭಾಗದ ಪ್ರತಿಭೆಗಳಿಗೆ ಸೂಕ್ತ ವೇದಿಕೆ ಕಲ್ಪಿಸಲು ಸಂಸ್ಥೆ ತೆರೆಯಲಾಗಿದೆ. ಎಲ್ಲರೂ ಸದುಪಯೋಗ ಪಡೆಯಬೇಕು ಎಂದರು. ಬಿಜೆಪಿ ಗ್ರಾಮೀಣ ಅಧ್ಯಕ್ಷ ಪವನ ಪಾಟೀಲ, ರಾಜು ಭದ್ರಗಡೆ, ಸಂಜು ದೇಸಾಯಿ, ಯಶವಂತ ಜಾಧವ, ನಜರುದ್ದಿನ್ ಮುಲ್ಲಾ ಇತರರಿದ್ದರು.