More

    ಉಪ ಚುನಾವಣೆಯಲ್ಲಿ ಬಿಜೆಪಿ ಗೆಲುವು ನಿಶ್ಚಿತ

    ಬಳ್ಳಾರಿ: ಮಸ್ಕಿ, ಬಸವ ಕಲ್ಯಾಣ ಮತ್ತು ಬೆಳಗಾವಿಯ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಗಳೇ ಗೆಲುವು ಸಾಧಿಸಲಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
    ಜಿಂದಾಲ್ ಏರ್ ರ್ಪೋರ್ಟ್ ನಲ್ಲಿ ಮಾಧ್ಯಮದವರೊಂದಿಗೆ ಶನಿವಾರ ಮಾತನಾಡಿದ ಅವರು, ಮೂರು ಕಡೆ ಆಕಾಂಕ್ಷಿಗಳ ಪಟ್ಟಿ ದೊಡ್ಡದಿದೆ.ಹೀಗಾಗಿ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಹೈಕಮಾಂಡ್ ಗೆ ಈಗಾಗಲೇ ಕಳಿಸಲಾಗಿದೆ.ನಾಳೆಯೊಳಗೆ ಅಭ್ಯರ್ಥಿಗಳು ಪಟ್ಟಿ ಅಂತಿಮ ಆಗಲಿದೆ.
    ರಾಜ್ಯಕ್ಕೆ ಉತ್ತಮ ಬಜೆಟ್ ನೀಡಿದ್ದೆವೆ.
    ಜನಪರ ಬಜೆಟ್ ಮುಂದಿಟ್ಟುಕೊಂಡು ಚುನಾವಣೆಗೆ ಹೋಗುತ್ತಿದ್ದೇವೆ.
    ರಾಜ್ಯದಲ್ಲಿ ಆಗುತ್ತಿರುವ ಅಭಿವೃದ್ಧಿ ನೋಡಿ ಜನರು ನಮಗೆ ಮತ ಹಾಕುವ ವಿಶ್ವಾಸವಿದ್ದು, ಬಿಜೆಪಿ ಪಕ್ಷದ ಹುರಿಯಾಳುಗಳು ಗೆಲುವು ಸಾಧಿಸಲಿದ್ದಾರೆ ಎಂದರು.
    ರಾಜ್ಯದಲ್ಲಿ ಕರೊನಾ ತಡೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಂಡಿದೆ.ಅಲ್ಲದೆ, ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.ಹೀಗಾಗಿ ಗಡಿ ಭಾಗದಲ್ಲಿ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಬಿಎಸ್ ವೈ ತಿಳಿಸಿದರು.

    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts