More

    ಎಚ್‌ಡಿಕೆ ಜನ್ಮದಿನ, ದೇವಾಲಯಗಳಲ್ಲಿ ವಿಶೇಷ ಪೂಜೆ

    ಮದ್ದೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಅವರ 63ನೇ ಹುಟ್ಟು ಹಬ್ಬದ ಅಂಗವಾಗಿ ಶಾಸಕ ಡಿ.ಸಿ.ತಮ್ಮಣ್ಣ ನೇತೃತ್ವದಲ್ಲಿ ಪಟ್ಟಣದ ವಿವಿಧ ದೇವಸ್ಥಾನಗಳಲ್ಲಿ ಶುಕ್ರವಾರ ವಿಶೇಷ ಪೂಜೆ ಸಲ್ಲಿಸಲಾಯಿತು.


    ಪಟ್ಟಣದ ಹೊಳೆಆಂಜನೇಯ ದೇವಸ್ಥಾನ, ಉಗ್ರನರಸಿಂಹಸ್ವಾಮಿ, ಮದ್ದೂರಮ್ಮ ದೇವಾಲಯ ಮತ್ತು ದರ್ಗಾದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಕುಮಾರಸ್ವಾಮಿ ಅವರಿಗೆ ಭಗವಂತ ಉತ್ತಮ ಆರೋಗ್ಯ, ಆಯಸ್ಸು ನೀಡಲಿ. ಮುಂದೆ ಈ ರಾಜ್ಯದ ಮುಖ್ಯಮಂತ್ರಿಯಾಗಿ ಸೇವೆ ಮಾಡುವಂತಹ ಅವಕಾಶವನ್ನು ಕಲ್ಪಿಸಿ ಕೊಡಲಿ ಎಂದು ಕಾರ್ಯಕರ್ತರು, ಮುಖಂಡರು ಪ್ರಾರ್ಥಿಸಿದರು.


    ತಾಲೂಕು ಜೆಡಿಎಸ್ ಘಟಕದ ಅಧ್ಯಕ್ಷ ಚಿಕ್ಕತಿಮ್ಮೇಗೌಡ, ಉಪಾಧ್ಯಕ್ಷ ದೇವರಹಳ್ಳಿ ವೆಂಕಟೇಶ್, ಕಾರ್ಯಾಧ್ಯಕ್ಷ ಮಾದನಾಯಕಹಳ್ಳಿ ರಾಜಣ್ಣ, ತಾಲೂಕು ಯುವ ಘಟಕದ ಅಧ್ಯಕ್ಷ ಎಂ.ಐ.ಪ್ರವೀಣ್, ಮಹಿಳಾ ಘಟಕದ ಅಧ್ಯಕ್ಷೆ ಪದ್ಮಾ ಹರೀಶ್, ಪುರಸಭೆ ಅಧ್ಯಕ್ಷ ಸುರೇಶ್ ಕುಮಾರ್, ಸ್ಥಾಯಿ ಸಮಿತಿ ಅಧ್ಯಕ್ಷ ಪ್ರಸನ್ನ, ಸದಸ್ಯರಾದ ಮಹೇಶ್, ವನಿತಾ, ಪ್ರಮೀಳಾ, ಬಸವರಾಜು, ಆದಿಲ್, ರಾಜ್ಯ ಸಂಘಟನಾ ಕಾರ್ಯದರ್ಶಿ ಬಿಳಿಯಪ್ಪ, ರಾಜ್ಯ ಅಲ್ಪಸಂಖ್ಯಾತ ವಿಭಾಗದ ಫೈರೋಜ್, ಗ್ರಾಪಂ ಅಧ್ಯಕ್ಷ ರವಿ, ಮುಖಂಡರಾದ ನಗರಕೆರೆ ಸಂದೀಪ, ಎಂ.ಪಿ.ಮಂಜುನಾಥ್, ಗೊರವನಹಳ್ಳಿ ಪ್ರಸನ್ನ ಇದ್ದರು.


    ಹಣ್ಣು ಹಂಪಲು ವಿತರಣೆ: ಪಟ್ಟಣದ ಗುರುಶಾಂತಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಜೆಡಿಎಸ್ ತಾಲೂಕು ಘಟಕದ ವತಿಯಿಂದ ರೋಗಿಗಳಿಗೆ ಹಣ್ಣು ವಿತರಿಸಲಾಯಿತು. ತಾಲೂಕು ಜೆಡಿಎಸ್ ಘಟಕದ ಅಧ್ಯಕ್ಷ ಚಿಕ್ಕ ತಿಮ್ಮೇಗೌಡ, ತಾಲೂಕು ಕಾರ್ಯಾಧ್ಯಕ್ಷ ಮಾದನಾಯಕನಹಳ್ಳಿ ರಾಜಣ್ಣ, ತಾಲೂಕು ಯುವ ಘಟಕದ ಅಧ್ಯಕ್ಷ ಎಂ.ಐ.ಪ್ರವೀಣ್ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts