ಚಿತ್ರದುರ್ಗ: ತಾಲೂಕಿನ ಪಂಡರಹಳ್ಳಿಯಲ್ಲಿ ಎಸ್ಜೆಎಂ ವಿದ್ಯಾಪೀಠ, ಯುವ ಸಬಲೀಕರಣ, ತಾಂತ್ರಿಕ ಶಿಕ್ಷಣ ಇಲಾಖೆ, ಎಸ್ಜೆಎಂ ಪಾಲಿಟೆಕ್ನಿಕ್ ಕಾಲೇಜಿನಿಂದ ಮಾ. 26ರವರೆಗೆ ಎನ್ಎಸ್ಎಸ್ ವಿಶೇಷ ಶಿಬಿರ ಹಮ್ಮಿಕೊಳ್ಳಲಾಗಿದೆ.
20ರಂದು ಸಂಜೆ 6ಕ್ಕೆ ಆರಂಭವಾಗುವ ಶಿಬಿರದ ಸಾನ್ನಿಧ್ಯವನ್ನು ಮುರುಘಾಮಠದ ಉಸ್ತುವಾರಿ ಶ್ರೀ ಬಸವಪ್ರಭು ಸ್ವಾಮೀಜಿ ವಹಿಸುವರು. ಗೊಡಬನಾಳ್ ಗ್ರಾಪಂ ಅಧ್ಯಕ್ಷೆ ಎಲ್.ಮಧು ರಮೇಶ್ ಉದ್ಘಾಟಿಸುವರು ಎಂದು ಪ್ರಕಟಣೆ ತಿಳಿಸಿದೆ.