More

    ಎಬಿವಿಪಿಯಿಂದ ಸಹಿ ಸಂಗ್ರಹ ಅಭಿಯಾನ

    ರಾಣೆಬೆನ್ನೂರ: ಡ್ರಗ್ಸ ದಂಧೆಯಲ್ಲಿ ಭಾಗಿಯಾದ ಎಲ್ಲರನ್ನೂ ಕೂಡಲೆ ಬಂಧಿಸಿ ದೇಶದ್ರೋಹ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ವತಿಯಿಂದ ಬುಧವಾರ ನಗರದ ಬಸ್ ನಿಲ್ದಾಣದ ಎದುರು ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು.

    ತಾಲೂಕು ಸಂಚಾಲಕ ರಾಘವೇಂದ್ರ ಮಾತನಾಡಿ, ದೇಶದಲ್ಲಿ ಕಾನೂನು ಬಾಹಿರ ಚಟುವಟಿಕೆಗಳನ್ನು ಸರ್ಕಾರ ಸಂಪೂರ್ಣ ನಿಮೂಲನೆ ಮಾಡಬೇಕು. ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾ ಕಂಡು ಬಂದಿರುವುದು ಅಸಹ್ಯಕರ ಸಂಗತಿ. ಇಂತಹ ದಂಧೆಯಲ್ಲಿ ಭಾಗಿಯಾದವರನ್ನು ಪೊಲೀಸರು ಬಂಧಿಸಿ, ಅವರ ಮೇಲೆ ದೇಶದ್ರೋಹ ಪ್ರಕರಣ ದಾಖಲಿಸುವ ಮೂಲಕ ಸಂಪೂರ್ಣ ದಂಧೆಯನ್ನು ಮಟ್ಟಹಾಕಬೇಕು ಎಂದು ಆಗ್ರಹಿಸಿದರು.

    ಪ್ರಮುಖರಾದ ಮಂಜು ಕೊಳ್ಳೇರ, ಗಂಗಾಧರ ಅಂಜಿಗಿ, ಮಂಜು ಮೀಸೆ, ಶಿವರಾಜ ಕರಿಗಾರ ಮತ್ತಿತರರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts