More

    ಎಸಿಬಿ ಬಲೆಗೆ ಗೃಹ ರಕ್ಷಕದಳ ಘಟಕಾಧಿಕಾರಿ

    ಸೋಮವಾರಪೇಟೆ: ಖಾಸಗಿ ಬಸ್ ನಿಲ್ದಾಣದಲ್ಲಿ ಗೃಹ ರಕ್ಷಕದಳ ಸಿಬ್ಬಂದಿ 1 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಗೃಹರಕ್ಷಕ ದಳದ ಘಟಕಾಧಿಕಾರಿ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬುಧವಾರ ಬಂಧಿಸಿದೆ.

    ಸೋಮವಾರಪೇಟೆ ಘಟಕಾಧಿಕಾರಿ ರುದ್ರಪ್ಪ ಬಂಧಿತ ಲಂಚಕೋರ. ಇವರ ಅಧೀನದಲ್ಲಿದ್ದ ಸಿಬ್ಬಂದಿ ಪ್ರತಿ ತಿಂಗಳು ತಲಾ 1 ಸಾವಿರ ರೂ. ಲಂಚ ನೀಡಬೇಕಾಗಿತ್ತು. ಲಂಚ ನೀಡದಿದ್ದರೆ ಬೇರೆಡೆ ಎತ್ತಂಗಡಿ ಮಾಡುವ ಬೆದರಿಕೆ ಹಾಕುತ್ತಿದ್ದರು. ಇದರಿಂದ ಬೇಸತ್ತ ಸಿಬ್ಬಂದಿ ಸುನೀಲ್ ಎಸಿಬಿಗೆ ದೂರು ನೀಡಿದ್ದರು.

    ಖಾಸಗಿ ಬಸ್್ ನಿಲ್ದಾಣದ ರಾಘವೇಂದ್ರ ಕ್ಯಾಂಟಿನ್ ಬಳಿ ಬುಧವಾರ 1 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ಸಂದರ್ಭ ಎಸಿಬಿ ದಾಳಿ ನಡೆಯಿತು. ಎಸಿಬಿ ಡಿವೈಎಸ್ಪಿ ಸದಾನಂದ ತಿಪ್ಪಣ್ಣನವರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಶ್ರೀಧರ್, ಸಬ್ ಇನ್ಸ್ಪೆಕ್ಟರ್ ಶಿಲ್ಪಾ ಪಾಲ್ಗೊಂಡಿದ್ದರು.

    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts