ಚಿಕ್ಕಮಗಳೂರು: ಎಸ್ಪಿ ಎಂ.ಎಚ್.ಅಕ್ಷಯ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಅವರ ಸ್ಥಾನಕ್ಕೆ ಬೆಂಗಳೂರಿನ ಎಸಿಬಿ ಎಸ್ಪಿ ಉಮಾ ಪ್ರಶಾಂತ್ ಅವರನ್ನು ನೇಮಕಗೊಳಿಸಿದೆ. ವರ್ಗಾವಣೆಯಾದ ಎಂ.ಎಚ್.ಅಕ್ಷಯ್ ಅವರಿಗೆ ಯಾವುದೇ ಸ್ಥಳ ನಿಯೋಜನೆ ಮಾಡಿಲ್ಲ. ಎರಡು ವರ್ಷಗಳಿಂದ ಚಿಕ್ಕಮಗಳೂರಿನಲ್ಲಿ ಎಸ್ಪಿಯಾಗಿದ್ದರು.